ಗಂಗೊಳ್ಳಿ:ಶ್ರೀ ವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

ಕುಂದಾಪುರ:ಗಂಗೊಳ್ಳಿ-ಕುಂದಾಪುರ ನಡುವೆ ಸಂಪರ್ಕ ಸೇತುವೆ ನಿರ್ಮಾಣ ಶೀಘೃ ಆಗಬೇಕೆಂದು ಸೇತುವೆ ಹೋರಾಟ ಸಮಿತಿ ವತಿಯಿಂದ ಗಂಗೊಳ್ಳಿ ಶ್ರೀವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.ಸೇತುವೆ ಹೋರಾಟ ಸಮಿತಿ ಅಧ್ಯಕ್ಷ ಉಮಾನಾಥ ದೇವಾಡಿಗ ಮಾತನಾಡಿ,ಗಂಗೊಳ್ಳಿ ಜನತೆಯ ಬಹು ಕಾಲದ ಬೇಡಿಕೆ ಇನ್ನೂ ಕೂಡ ಕನಸಾಗಿಯೇ ಉಳಿದಿದೆ.ಗಂಗೊಳ್ಳಿ-ಕುಂದಾಪುರ ನಡುವೆ ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿದರೆ ವ್ಯಾಪಾರ ವಹಿವಾಟುಗಳು ವೃದ್ಧಿ ಆಗುವುದ ಜತೆಗೆ ಗ್ರಾಮದ ಜನರಿಗೆ ಬಹಳಷ್ಟು ಅನುಕೂಲ ವಾಗಲಿದೆ ಎಂದರು.ಸೇತುವೆ ನಿರ್ಮಾಣ ಕಾರ್ಯದ ಬಗ್ಗೆ ಜನಪ್ರತಿನಿಧಿಗಳು […]

ಧನ್ವಿ ಮರವಂತೆಗೆ ಅಂತರಾಜ್ಯ ಯುವ ಪ್ರತಿಭಾ ಪ್ರಶಸ್ತಿ

ಬೈಂದೂರು:ಕಾಸರಗೋಡು ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ವಿಶಂತಿ ವರ್ಷಚಾರಣೆ ಅಂಗವಾಗಿ ನಡೆದ ಗ್ರಂಥಾಲಯ ಯುವ ಪ್ರತಿಭಾ ಪುರಸ್ಕಾರ ಭರವಸೆಯ ಬೆಳಕು 2023 ರ ಕಾರ್ಯಕ್ರಮದಲ್ಲಿ ಬಾಲ ಪ್ರತಿಭೆ ಧನ್ವಿ ಮರವಂತೆ ಅವರಿಗೆ ಅಂತರಾಜ್ಯ ಯುವ ಪ್ರತಿಭಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ತ್ರಾಸಿ ಡಾನ್ ಬೇಸ್ಕೊ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ.

ಅ.7 ರಂದು ಶ್ರೀಗುಹೇಶ್ವರ ದೇವಳದಲ್ಲಿ ಅಷ್ಟಮಂಗಲ ಪ್ರಶ್ನೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಗುಜ್ಜಾಡಿ ಗ್ರಾಮದ ಕೊಡಪಾಡಿಯಲ್ಲಿರುವ ಶ್ರೀ ಗುಹೇಶ್ವರ ದೇವಾಲಯವು ಸಾವಿರಾರು ವರ್ಷಗಳ ಇತಿಹಾಸವನ್ನುಳ್ಳ ದೇವಾಲಯಗಳಲ್ಲಿ ಒಂದಾಗಿದೆ.ಪಡುವಣ ಕಡಲಿನಿಂದ ಆರಂಭಗೊಂಡು ಸೌಪರ್ಣಿಕಾ ನದಿಯಿಂದ ಸುತ್ತುವರಿಯಲ್ಪಟ್ಟ ಗಂಗೊಳ್ಳಿ,ಗುಜ್ಜಾಡಿ,ತ್ರಾಸಿ ಮತ್ತು ಹೊಸಾಡು ಈ ನಾಲ್ಕು ಗ್ರಾಮಗಳ ಗ್ರಾಮದೇವರಾದ ಶ್ರೀ ಗುಹೇಶ್ವರ ಸನ್ನಿಧಾನದಲ್ಲಿ ಜೀರ್ಣೋದ್ಧಾರ ಅಂಗವಾಗಿ ಕೇರಳದ ಪ್ರಸಿದ್ಧ ದೈವಜ್ಞರಾದ ಶ್ರೀ ನಾರಾಯಣ ನಂಬೂದಿರಿ ಕೈಮುಕ್ಕು ಹಾಗೂ ಇತರ ದೈವಜ್ಞರ ಸಹಕಾರದೊಂದಿಗೆ ಅಷ್ಟಮಂಗಲ ಪ್ರಶ್ನೆಯು ಅ.7 ರಂದು ಶನಿವಾರ ದಿಂದ ಆರಂಭಗೊಂಡು ಅ.09 ರ ಸೋಮವಾರ […]

You cannot copy content of this page