ದೇವಾಡಿಗ ನವೋದಯ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು:ದೇವಾಡಿಗ ನವೋದಯ ಸಂಘದ ವಾರ್ಷಿಕ ಮಹಾಸಭೆ ಇತ್ತೀಚಿಗಷ್ಟೇ ಬೆಂಗಳೂರಿನ ಶ್ರೀನಿಧೀ ಲೇಔಟ್ ವೆಲ್ ಫೇರ್ ಅಸೋಸಿಯೇಷನ್ ಸಭಾಭವನದಲ್ಲಿ ನಡೆಯಿತು.ಬೆಂಗಳೂರು ದೇವಾಡಿಗ ನವೋದಯ ಸಂಘದ ಅಧ್ಯಕ್ಷ ಬಿ.ಆರ್ ದೇವಾಡಿಗ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ ಸಂಘದ 2019-23ರ ಸಾಲಿನ ಕಾರ್ಯಕ್ರಮಗಳ ವರದಿ ವಾಚಿಸಿದರು. ಸಂಘದ ಕೋಶಾಧಿಕಾರಿ ಮಂಜುನಾಥ ದೇವಾಡಿಗ ಸಂಘ 2019-23ರ ಸಾಲಿನ ಆಯವ್ಯಯಗಳ ವರದಿ ವಾಚಿಸಿದರು. ದೇವಾಡಿಗ ನವೋದಯ ಸಂಘ ರಿ ಬೆಂಗಳೂರು ಇದರ 2023-2025ರ ನೂತನ ಕೋರ್ ಕಮಿಟಿ […]

ಗಂಗೊಳ್ಳಿ:ಶ್ರೀ ವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

ಕುಂದಾಪುರ:ಗಂಗೊಳ್ಳಿ-ಕುಂದಾಪುರ ನಡುವೆ ಸಂಪರ್ಕ ಸೇತುವೆ ನಿರ್ಮಾಣ ಶೀಘೃ ಆಗಬೇಕೆಂದು ಸೇತುವೆ ಹೋರಾಟ ಸಮಿತಿ ವತಿಯಿಂದ ಗಂಗೊಳ್ಳಿ ಶ್ರೀವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.ಸೇತುವೆ ಹೋರಾಟ ಸಮಿತಿ ಅಧ್ಯಕ್ಷ ಉಮಾನಾಥ ದೇವಾಡಿಗ ಮಾತನಾಡಿ,ಗಂಗೊಳ್ಳಿ ಜನತೆಯ ಬಹು ಕಾಲದ ಬೇಡಿಕೆ ಇನ್ನೂ ಕೂಡ ಕನಸಾಗಿಯೇ ಉಳಿದಿದೆ.ಗಂಗೊಳ್ಳಿ-ಕುಂದಾಪುರ ನಡುವೆ ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿದರೆ ವ್ಯಾಪಾರ ವಹಿವಾಟುಗಳು ವೃದ್ಧಿ ಆಗುವುದ ಜತೆಗೆ ಗ್ರಾಮದ ಜನರಿಗೆ ಬಹಳಷ್ಟು ಅನುಕೂಲ ವಾಗಲಿದೆ ಎಂದರು.ಸೇತುವೆ ನಿರ್ಮಾಣ ಕಾರ್ಯದ ಬಗ್ಗೆ ಜನಪ್ರತಿನಿಧಿಗಳು […]

ಧನ್ವಿ ಮರವಂತೆಗೆ ಅಂತರಾಜ್ಯ ಯುವ ಪ್ರತಿಭಾ ಪ್ರಶಸ್ತಿ

ಬೈಂದೂರು:ಕಾಸರಗೋಡು ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ವಿಶಂತಿ ವರ್ಷಚಾರಣೆ ಅಂಗವಾಗಿ ನಡೆದ ಗ್ರಂಥಾಲಯ ಯುವ ಪ್ರತಿಭಾ ಪುರಸ್ಕಾರ ಭರವಸೆಯ ಬೆಳಕು 2023 ರ ಕಾರ್ಯಕ್ರಮದಲ್ಲಿ ಬಾಲ ಪ್ರತಿಭೆ ಧನ್ವಿ ಮರವಂತೆ ಅವರಿಗೆ ಅಂತರಾಜ್ಯ ಯುವ ಪ್ರತಿಭಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ತ್ರಾಸಿ ಡಾನ್ ಬೇಸ್ಕೊ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ.

You cannot copy content of this page