ತ್ರಾಸಿ ಪಂಚಾಯತ್‍ಗೆ,ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪುರಸ್ಕಾರ-2023

ಕುಂದಾಪುರ:ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯಿತಿಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪುರಸ್ಕಾರ-2023 ರಾಜ್ಯ ಮಟ್ಟದ ಪ್ರಶಸ್ತಿ ದೊರೆತ್ತಿದೆ.ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಮತ್ತು ಪಿಡಿಒ ಶೋಭಾ ಎಸ್ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಮತ್ತು […]

ಹೆಮ್ಮಾಡಿ:ರಾತ್ರೋರಾತ್ರಿ ಲಾರಿಗಳ ಮೇಲೆ ಪೊಲೀಸ್ ನೋಟಿಸ್-ಶರತ್ ಕುಮಾರ್ ಶೆಟ್ಟಿ ಆರೋಪ

ಕುಂದಾಪುರ:3ಎ ಲೆಸನ್ಸ್ ರದ್ದುಗೊಳಿಸಿ ಕಠಿಣ ಕಾನೂನನ್ನು ಜಾರಿ ಮಾಡಿ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದರಿಂದ ಲಾರಿ ಮತ್ತು ಟೆಂಪೊ ಮಾಲೀಕರು ಮತ್ತು ಚಾಲಕರ ಸಂಘ ಬೈಂದೂರು ವಲಯದ ವತಿಯಿಂದ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರದ ಅಂಗವಾಗಿ ಹೆಮ್ಮಾಡಿ ಹೆದ್ದಾರಿ ಬದಿಯಲ್ಲಿ ಲಾರಿಗಳನ್ನು ನಿಲ್ಲಿಸಿ ಕಳೆದ ಐದು ದಿನಗಳಿಂದ ನಿರಂತರವಾಗಿ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 66 ರ ಬದಿಯಲ್ಲಿ ಟಿಪ್ಪರ್ ಮತ್ತು ಲಾರಿಗಳನ್ನು ನಿಲಿಸಿದ್ದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗುತ್ತದೆ ಎನ್ನುವ ನೆಪ […]

ಹೆಮ್ಮಾಡಿ:ಕಟ್ಟಡ ನಿರ್ಮಾಣ ಕಾರ್ಯ ಸಹಿತ ತೋಟದ ಕೆಲಸಗಳು ಸಹ ನಡೆಯದಂತಹ ಪರಿಸ್ಥಿತಿ ಉದ್ಭವವಾಗಿದೆ-ಬಿ.ಎಂ ಸುಕುಮಾರ್ ಶೆಟ್ಟಿ

ಕುಂದಾಪುರ:ಕಠಿಣವಾದ ಕಾನೂನನ್ನು ಜಿಲ್ಲೆಯಲ್ಲಿ ಜಾರಿ ಮಾಡಿರುವುದರಿಂದ ಲಾರಿ ಮಾಲೀಕರು ಮತ್ತು ಚಾಲಕರಿಗೆ ಬಹಳಷ್ಟು ತೊಂದರೆ ಆಗಿದ್ದು ಕಟ್ಟಡ ನಿರ್ಮಾಣ ಕಾರ್ಯ ಸಹಿತ ತೋಟದ ಕೆಲಸಗಳು ಸಹ ನಡೆಯದಂತಹ ಪರಿಸ್ಥಿತಿ ಉದ್ಭವವಾಗಿದೆ.ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.ಲಾರಿ ಮತ್ತು ಟೆಂಪೊ ಮಾಲೀಕರು ಹಾಗೂ ಚಾಲಕರ ಸಂಘ ಬೈಂದೂರು ವಲಯದ ವತಿಯಿಂದ ಹೆಮ್ಮಾಡಿಯಲ್ಲಿ ನಡೆಯುತ್ತಿರುವ 5ನೇ ದಿನದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ […]

You cannot copy content of this page