ಉಪ್ಪುಂದ: ಸತೀಶ್ ಕೊಠಾರಿಗೆ ಸಾಧನ ಶ್ರೀ ಉದ್ಯಮ ರತ್ನ ಪ್ರಶಸ್ತಿ ಪ್ರದಾನ

ಬೈಂದೂರು:JCI ಉಪ್ಪುಂದ ದಿಗ್ವಿಜಯ 2023 19ನೇ JC ಸಪ್ತಾಹ ಏಳನೇ ದಿನದ ಸಮಾರೋಪ ಸಮಾರಂಭದಲ್ಲಿ ಸತೀಶ್ ಕೊಠಾರಿ ಅವರಿಗೆ ಸಾಧನ ಶ್ರೀ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸತೀಶ್ ಕೊಠಾರಿ ಅವರುಪ್ರಾಥಮಿಕ ಶಿಕ್ಷಣವಾದ 5ನೇ ತರಗತಿಯನ್ನು ಅರ್ಧಕ್ಕೆ ಮುಗಿಸಿ,ಮನೆಯ ಬಡತನವನ್ನು ನೀಗಿಸಬೇಕೆಂಬ ಛಲದೊಂದಿಗೆ ಬೆಂಗಳೂರಿಗೆ ತೆರಳುತ್ತಾರೆ.ಸಣ್ಣ ಪುಟ್ಟ ಹೋಟೆಲ್,ಕ್ಯಾಂಟೀನ್ ಗಳಲ್ಲಿ ಕ್ಲೀನರ್ ಆಗಿ,ವೆಸ್ಟರ್ ಆಗಿ ಕೆಲಸ ಮಾಡುತ್ತಾ ತನ್ನ ಪ್ರಾರಂಭಿಕ ದುಡಿಮೆಯನ್ನು ಆರಂಭಿಸುತ್ತಾರೆ.ಎಷ್ಟೇ ದುಡಿದರೂ ಮನೆಯ ಬಡತನದ ಪರಿಸ್ಥಿತಿ ಸುಧಾರಿಸದೇ ಇರುವುದನ್ನು ಮನಗಂಡು ಇನ್ನೂ ಹೆಚ್ಚಿನ ದುಡಿಮೆಗಾಗಿ […]

ನಾವುಂದ:ಇಂಜಿನಿಯರ್ ವಿಜೇಂದ್ರ ಆಚಾರ್ಯಗೆ ಸನ್ಮಾನ

ಬೈಂದೂರು:ಸರ್.ಎಂ ವಿಶೇಶ್ವರಯ್ಯರವರ ಜನ್ಮ ಜಯಂತಿ ಪ್ರಯುಕ್ತ ನಾವುಂದ ಮೆಸ್ಕಾಂ ವಿಭಾಗದ ಜೂನಿಯರ್ ಇಂಜಿನಿಯರ್ (ಜೆ.ಇ) ವಿಜೇಂದ್ರ ಆಚಾರ್ಯ ಅವರನ್ನು ನಾವುಂದ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ ಶೆಟ್ಟಿ,ನಾವುಂದ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ,ಕ್ಲಬ್ಬಿನ ಕಾರ್ಯದರ್ಶಿ ಅಶೋಕ ವಿ ಆಚಾರ್ಯ,ಉಪಾಧ್ಯಕ್ಷ ಸಮರ ಶೆಟ್ಟಿ,ಮೆಸ್ಕಾಂ ಮೇಲ್ವಿಚಾರಕ ಅಧಿಕಾರಿ ಸುಧಾಕರ,ದಿನೇಶ್ ಆಚಾರ್ಯ,ವಿಜಯ ಶೆಟ್ಟಿ,ಪ್ರಮೋದ್ ಪೂಜಾರಿ ಉಪಸ್ಥಿತರಿದ್ದರು.

ಪಡುಕೋಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯದ ಆಶ್ರಯದಲ್ಲಿ ಪಡುಕೋಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆ ಪಡುಕೋಣೆಯಲ್ಲಿ ನಡೆಯಿತು.ಶಾಲೆಯ ಸಂಚಾಲಕ ವಂದನೀಯ ಫ್ರಾನ್ಸಿಸ್ ಕರ್ನೇಲಿಯೊ ಅಧ್ಯಕ್ಷತೆಯನ್ನು ವಹಿಸಿದ್ದರು,ನಾಡಾ ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಉದ್ಘಾಟಿಸಿದರು.ಗ್ರಾ.ಪಂ ಸದಸ್ಯರಾದ ಸುಧಾಕರ ಶೆಟ್ಟಿ ಮತ್ತು ಜ್ಯೋತಿ,ಶಾಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ,ಗಿರಿಜಾ,ಅಚ್ಯತ್ ಬಿಲ್ಲವ,ಪ್ರಭು ಕೆನಡಿ ಪರೇರಾ,ಅಲೆಕ್ಸ್ ಆಂಟನಿ ಡಿಸೋಜಾ,ವಿನ್ಸೆಂಟ್ ಡಿಸೋಜಾ,ಫಿಲಿಪ್ […]

You cannot copy content of this page