ಮರವಂತೆ ಹೊರ ಬಂದರು ಎರಡನೇ ಹಂತದ ಕಾಮಗಾರಿಗೆ ಚಾಲನೆ

ಕುಂದಾಪುರ:ಮರವಂತೆಯಲ್ಲಿ ಕಳೆದ ಎಂಟು ವರ್ಷಗಳಿಂದ ಬ್ರೆಕ್ ವಾಟರ್ ಕೆಲಸ ಸಿಆರ್‍ಝಡ್ ನಿಮಯ ಹಾಗೂ ಬೇರೆ ಬೇರೆ ಕಾರಣಗಳಿಂದ ನೆನೆಗುದ್ದಿಗೆ ಬಿದ್ದಿದ್ದು.ನಿಂತು ಹೋಗುವ ಸ್ಥಿತಿಯಲ್ಲಿದ್ದ ಕಾಮಗಾರಿಗೆ ಮರು ಜೀವ ನೀಡುವ ಕೆಲಸ ಮಾಡಲಾಗಿದೆ.ಸುಮಾರು 80 ಕೋಟಿ.ರೂ ವೆಚ್ಚದಲ್ಲಿ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸ ಕೂಡಲೆ ಆರಂಭಗೊಳ್ಳಲಿದ್ದು.ಪೂರ್ತಿ ಹಣ ರಾಜ್ಯ ಸರಕಾರವೆ ಭರಿಸಲಿದೆ ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ.ಎಸ್ ವೈದ್ಯ ಹೇಳಿದರು.ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ಮಂಗಳವಾರ ಮರವಂತೆಯಲ್ಲಿ ಚಾಲನೆ […]

ಬೆಣ್ಗೆರೆ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ ಸಂಭ್ರಮ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೈವಸ್ಥಾನದಲ್ಲಿ ವಾಷಿಕ ಹಾಲು ಸೇವೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ನಡೆಯಿತು.ಶ್ರೀ ದೇವರಿಗೆ ಗೆಂಡಸೇವೆ,ತುಲಾಭಾರ ಸೇವೆ,ಮಹಾಪೂಜೆ,ಅನ್ನದಾನ ಸೇವೆ,ಸದರ್ಶನ ಸೇವೆ ಜರುಗಿತು,ಕುಂದಾಪುರ,ಬೈಂದೂರು ತಾಲೂಕು ಸಹಿತ ಘಟ್ಟದ ಮೇಲಿನ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸಿ ಕಟ್ಟುಕಟ್ಟಲೆ ಸೇವೆಯನ್ನು ಸಲ್ಲಿಸಿದರು.ದೇವಸ್ಥಾನದ ಅಧ್ಯಕ್ಷರಾದ ಬಾಬು ಜೆ ಪೂಜಾರಿ ಉಪ್ಪುಂದ,ಉಪಾಧ್ಯಕ್ಷರಾದ ಎಸ್.ಕೆ ಪೂಜಾರಿ,ಕಾರ್ಯದರ್ಶಿ ನರಸಿಂಹ ಪೂಜಾರಿ,ಪಾತ್ರಿಗಳಾದ ನಾರಾಯಣ ಪೂಜಾರಿ,ನರಸಿಂಹ ಪೂಜಾರಿ,ಮಂಜು ಪೂಜಾರಿ,ಅರ್ಚಕ ಚಿಕ್ಕಯ್ಯ ಪೂಜಾರಿ, ಪದಾಧಿಕಾರಿಗಳು,ಪಾತ್ರಿಗಳು,ಅರ್ಚಕರು,ಗ್ರಾಮಸ್ಥರು,ನಂಬಿದ ಕುಟುಂಬಸ್ಥರು ಉಪಸ್ಥಿತರಿದ್ದರು.

ನಾಡದೋಣಿ ಮೀನುಗಾರರಿಂದ ರಾಷ್ಟ್ರೀಯ ಹೆದ್ದಾರಿ ತಡೆ

ಕುಂದಾಪುರ:ಬುಲ್ಟ್ರೋಲ್ ಮತ್ತು ಲೈಟ್ ಫಿಶಿಂಗ್ ಮೀನುಗಾರಿಕೆ ವಿರೋಧಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆಯನ್ನು ತ್ರಾಸಿಯಲ್ಲಿ ಶುಕ್ರವಾರ ಮಾಡಲಾಯಿತು.ಮೀನುಗಾರ ಮುಖಂಡ ಮದನ್ ಕುಮಾರ್ ಉಪ್ಪುಂದ ಮಾತನಾಡಿ,12 ರಿಂದ 240 ನಾಟಿಕಲ್ ದೂರದ ತನಕ ಅವೈಜ್ಞಾನಿಕ ಮೀನುಗಾರಿಕೆಯನ್ನು ಕೇಂದ್ರ ಸರಕಾರ ನಿಷೇಧ ಮಾಡಿದೆ.ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದರು ರಾಜ್ಯದಲ್ಲಿ ಅವೈಜ್ಞಾನಿಕ ಮೀನುಗಾರಿಕೆ ಇನ್ನೂ ನಿಷೇಧಗೊಂಡಿಲ್ಲ.ಸಾಂಪ್ರದಾಯಿಕ ಮೀನುಗಾರರ ಜೀವನದ ದೃಷ್ಟಿಯಿಂದ ಅವೈಜ್ಞಾನಿಕ ಮೀನುಗಾರಿಕೆ ನಿಷೇಧಕ್ಕೆ ಸರಕಾರ ಕೂಡಲೇ ಕಠಿಣ […]

You cannot copy content of this page