ಹೊಸಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಉದ್ಘಾಟನೆ

ಕುಂದಾಪುರ:ಕರ್ನಾಟಕ ಸರಕಾರ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯದ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಹೊಸಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು.ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಪ್ರತಿಭಾ ಕಾರಂಜಿ ಅಂತಹ ಸ್ಪರ್ಧೆಗಳು ಉತ್ತಮವಾದ ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದಾಗ […]

ನಿಕ್ಷಯ್ ಮಿತ್ರ ಯೋಜನೆ ಕಿಟ್ ವಿತರಣೆ

ಕುಂದಾಪುರ:ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷೆ ಯೋಜನೆಯಾದ ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡುವ ನಿಕ್ಷಯ್ ಮಿತ್ರ ಯೋಜನೆಡಿ ಹೊಸಾಡು ಗ್ರಾಮ ಪಂಚಾಯತ್ ವತಿಯಿಂದ ಕ್ಷಯರೋಗದಿಂದ ಬಳಲುತ್ತಿದ್ದ ಹೊಸಾಡು ಗ್ರಾಮದ ವ್ಯಕ್ತಿಗೆ ಆಹಾರದ ಕಿಟ್‍ನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಹೊಸಾಡು ಗ್ರಾಮ ಪಂಚಾಯತ್ ಪಿಡಿಒ ಪಾರ್ವತಿ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಸಿಬ್ಬಂದಿಗಳು ಹಾಗೂ ತಾಲೂಕು ಕ್ಷಯ ಘಟಕ ಬೈಂದೂರು,ಕೆಎಂಸಿ ಹಾಸ್ಪೆಟಲ್ ವೈದ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಂಚುಗೋಡು ಶಾಲೆ ಹಳೆ ವಿದ್ಯಾರ್ಥಿ ಸಂಘಕ್ಕೆ ಪ್ರಶಸ್ತಿ

ಕುಂದಾಪುರ:ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಬೈಂದೂರು ತಾಲೂಕು ವತಿಯಿಂದ ಬೈಂದೂರುನಲ್ಲಿ ಸೋಮವಾರ ನಡೆದ ಸಾಧಕ ಎಸ್‍ಡಿಎಂಸಿ ಅಧ್ಯಕ್ಷರು ಹಾಗೂ ಸಾಧಕ ಹಳೆವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಸದಸ್ಯರಿಗೆ ಸಾಮಥ್ರ್ಯವರ್ಧನಾ ತರಬೇತಿ ಕಾರ್ಯಕ್ರಮದಲ್ಲಿ ಅತ್ಯುತ್ತಮ ಕೆಲಸದೊಂದಿಗೆ ಗುರುತಿಸಿಕೊಂಡಿರುವ ಹೊಸಾಡು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲೆಯ ಹಳೆ ವಿದ್ಯಾರ್ಥಿ ಸಂಘಕ್ಕೆ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಕಂಚುಗೋಡು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪರವಾಗಿ ಸಂಘದ ಅಧ್ಯಕ್ಷ ಚೌಕಿ ಅಶೋಕ ಖಾರ್ವಿ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ […]

You cannot copy content of this page