ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಬೈಂದೂರಿನಲ್ಲಿ ಹಿಂಜಾವೇ ಪ್ರತಿಭಟನೆ
ಬೈಂದೂರು:ಹಿಂದು ಜಾಗರಣ ವೇದಿಕೆ ಪ್ರಾಂತ ಸಹ ಸಂಚಾಲಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ಬಂಧಿಸಿರುದ್ದನ್ನು ಖಂಡಿಸಿ ಬೈಂದೂರು ತಾಲೂಕು ಹಿಂದೂ ಜಾಗರಣ ವೇದಿಕೆ ವತಿಯಿಂದ ಬೈಂದೂರು ಅಂಡರ್ ಪಾಸ್ ಬಳಿ ಪ್ರತಿಭಟನೆ ಮಂಗಳವಾರ ನಡೆಯಿತು. ಬೈಂದೂರು ತಾಲೂಕು ಸಹ ಸಂಚಾಲಕ ಹರೀಶ್ ಸೇಳ್ಕೋಡ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ,ಇಂದಿನ ಕಾಂಗ್ರೆಸ್ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಹಿಂದೂ ಸಂಘಟನೆಗಳ ನಾಯಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿ ಹಿಂದೂ ಸಂಘಟನೆಗಳ ಸಾಮಾಜಿಕ ಚಳವಳಿಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದು […]



























































































































































































































































































































































































































































































































































































































































































































































































































































































































































































































































































































































































































































































































































































































































































