ಗಂಗೊಳ್ಳಿ ಪಂಚಾಯಿತಿ ಅಧಿಕಾರ ಸ್ವೀಕಾರ ವೇಳೆ ಮೌಲಿಯಿಂದ ಪ್ರಾರ್ಥನೆ ಆರೋಪ,ಹಿಂದು ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ

ಕುಂದಾಪುರ:ಅಧಿಕಾರ ಸ್ವೀಕಾರದ ವೇಳೆ ಪಂಚಾಯಿತಿ ಕಟ್ಟಡದ ಒಳಗಡೆ ಅನಧಿಕೃತವಾಗಿ ನಮಾಜ್ ಮಾಡಿರುವುದು ಅತ್ಯಂತ ಕಳವಳಕಾರಿ ಸಂಗತಿ ಆಗಿದ್ದು.ಅಧಿಕಾರಕ್ಕಾಗಿ ಸಮಾಜದ ಸ್ವಾಸ್ತ್ಯವನ್ನು ಕೇಡಿಸುವಂತ ಕಾರ್ಯಗಳಿಗೆ ಮುಂದಾಗಿರುವುದು ಸರಿ ಅಲ್ಲಾ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧಿಕಾರ ಸ್ವೀಕಾರ ವೇಳೆಯಲ್ಲಿ ಮುಸ್ಲಿಂ ಸಮುದಾಯದ ಮೌಲಿಯಿಂದ ಪಂಚಾಯಿತಿ ಒಳಗಡೆ ಪ್ರಾರ್ಥನೆ ಮಾಡಿರುವುದನ್ನು ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿ ಗಂಗೊಳ್ಳಿ ವತಿಯಿಂದ ಶುಕ್ರವಾರ ಗಂಗೊಳ್ಳಿ ಪಂಚಾಯಿತಿ ಎದುರುಗಡೆ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಬೈಂದೂರು ಬಿಜೆಪಿ […]

ಯಕ್ಷಗಾನ ಕಲಾವಿದರಿಗೆ ಗೌರವದ ಸನ್ಮಾನ

ಕುಂದಾಪುರ:ಧಾರ್ಮಿಕ ಮುಖಂಡ ಸಮಾಜ ಸೇವಕರಾದ ದುಬೈ ಉದ್ಯಮಿ ಸೇನಾಪುರ ಹಾಡಿಮನೆ ಮಂಜುನಾಥ ವಿನಯ ಪೂಜಾರಿ ದಂಪತಿಗಳ ವತಿಯಿಂದ ಸೇನಾಪುರ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟ ಹಾಗೂ ಮೇಳದ ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಬುಧವಾರ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಕಲಾವಿದರನ್ನು ಸನ್ಮಾನಿಸಿ ಮಾತನಾಡಿ,ಆಧುನಿಕ ಜೀವನ ಶೈಲಿ ಪದ್ಧತಿ ನಡುವೆಯೂ ಯಕ್ಷಗಾನದ ನೆಲೆ ಗಟ್ಟು ಸುಭದ್ರವಾಗಿ ಉಳಿಯಲು ಜನರು ಯಕ್ಷಗಾನದ ಮೇಲಿಟ್ಟಿರುವ ದೈವಿಕ ಭಾವನೆಗಳೆ ಕಾರಣವಾಗಿದೆ ಎಂದು […]

ಹುಟ್ಟು ಹಬ್ಬ ಆಚರಣೆ,ಅಂಗನವಾಡಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಕುಂದಾಪುರ:ಧಿಮಂತ ರಾಜಕಾರಣಿ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಮನೆ ಮಾತಾಗಿರುವ ದಿ ಆರ್.ಕೆ ಸಂಜೀವ ರಾವ್ ಖಂಬದಕೋಣೆ ಅವರ ಮರಿ ಮೊಮ್ಮಗ ಹಾಗೂ ಸಮಾಜ ಸೇವಕರಾದ ಉದ್ಯಮಿ ಕೆ.ಎಸ್ ಪ್ರಮೋದ್ ರಾವ್ ಅವರ ಮೊಮ್ಮಗ ಪ್ರಥಮ ರಾವ್ ಅವರ ಆರನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಖಂಬದಕೋಣೆ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಸಿಹಿ ತಿಂಡಿ ಬುಧವಾರ ವಿತರಿಸಲಾಯಿತು.ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ರುದ್ರಾಭಿಷೇಕ ಪೂಜೆಯನ್ನು ಸಲ್ಲಿಸಲಾಯಿತು.ಬಿಜೆಪಿ ವಂಡ್ಸೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ […]

You cannot copy content of this page