ನಾಡ ಪಂಚಾಯತ್ ಅಧ್ಯಕ್ಷರಾಗಿ ಪಾರ್ವತಿ ಮೊಗವೀರ ಆಯ್ಕೆ

ಬೈಂದೂರು:ನಾಡ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಾರ್ವತಿ ಮೊಗವೀರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರಥ್ವಿಶ್ ಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜಿಪಿ ಪಕ್ಷದ ಅಧಿಕೃತ ಅಭ್ಯರ್ಥಿ ಪ್ರಥಿಶ್ ಶೆಟ್ಟಿ ಹಾಗೂ ಬಂಡಾಯ ಅಭ್ಯರ್ಥಿ ಶ್ರೀಧರ ದೇವಾಡಿಗ ಸ್ಪರ್ಧೆ ಮಾಡಿದ್ದರು.19 ಸದಸ್ಯರೊಳಗೊಂಡ ನಾಡ ಪಂಚಾಯತಿಯಲ್ಲಿ 14 ಜನ ಬಿಜೆಪಿ ಸದಸ್ಯರು,03 ಜನ ಕಾಂಗ್ರೆಸ್ ಸದಸ್ಯರು ಹಾಗೂ 02 ಜನ ಕಮ್ಯುನಿಸ್ಟ್ ಪಕ್ಷದ ಸದಸ್ಯರಿದ್ದಾರೆ.ಒಬ್ಬ ಪಂಚಾಯತ್ ಸದಸ್ಯೆ ಗೈರಾಗಿದ್ದರಿಂದ ಪ್ರಥ್ವಿಶ್ ಶೆಟ್ಟಿ […]

ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ

ಬೈಂದೂರು:ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ಜರುಗಿತು.ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀವರಾಹ ಸ್ವಾಮಿ,ಶ್ರೀವಿಷ್ಣು ಮತ್ತು ಶ್ರೀ ನರಸಿಂಹ ದೇವರಿಗೆ ವಿಶೇಷ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ನಡೆಯಿತು.ಬೆಳೆಗೆ ಶ್ರೇಯಸ್ಸು ಆಗಲಿ ಎಂದು ರೈತಾಪಿ ಜನರು ಮಳೆ ದೇವರಾದ ಶ್ರೀವರಾಹ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ನವ ಜೋಡಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.ದೇವಳದ ವ್ಯವಸ್ಥಾಪನಾ ಸಮಿತಿ […]

ಹೆಮ್ಮಾಡಿ ಪಂಚಾಯತಿನ ಅಧ್ಯಕ್ಷರಾಗಿ ನೇತ್ರಾವತಿ ಆಯ್ಕೆ

ಕುಂದಾಪುರ:ಹೆಮ್ಮಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ನೇತ್ರಾವತಿ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಡಿ ಕಾಂಚನ್ ಆಯ್ಕೆಯಾಗಿದ್ದಾರೆ.11 ಪಂಚಾಯತ್ ಸದಸ್ಯರೊಳಗೊಂಡ ಹೆಮ್ಮಾಡಿ ಪಂಚಾಯತ್‍ನಲ್ಲಿ ಕಾಂಗ್ರೆಸ್ ಬೆಂಬಲಿತ 08 ಸದಸ್ಯರು ಹಾಗೂ ಬಿಜೆಪಿ ಬೆಂಬಲಿತ 03 ಸದಸ್ಯರಿದ್ದಾರೆ ನಿರೀಕ್ಷೆಯಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಪಕ್ಷದ ಸದಸ್ಯರ ಪಾಲಾಗಿದೆ.

You cannot copy content of this page