ಮಿಷನ್ ಇಂದ್ರ ಧನುಷ್ 5.0 ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಸಹಯೋಗದಲ್ಲಿ ಮಿಷನ್ ಇಂದ್ರ ಧನುಷ್ 5.0 ಅಭಿಯಾನ ಕಾರ್ಯಕ್ರಮ ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಅವರು ಮಿಷನ್ ಇಂದ್ರ ಧನುಷ್ 5.0 ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,ಮಕ್ಕಳನ್ನು ಮತ್ತು ಗರ್ಭಿಣಿಯನ್ನು ಕಾಡುವ ಅನೇಕ ಕಾಯಿಲೆಗಳಿಗೆ ಮಿಷನ್ ಇಂದ್ರ ಧನುಷ್ ಅಭಿಯಾನದಲ್ಲಿ ನೀಡುವ ಲಸಿಕೆಗಳು ಪರಿಣಾಮಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ನೀಡಿ,ರೋಗಗಳು ಬಾರದಂತೆ […]

ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ

ಕುಂದಾಪುರ:ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ಅವರು ನೇಮಕಗೊಂಡಿದ್ದಾರೆ.ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದರು.ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿಎನ್ ಅವರು ವರ್ಗಾವಣೆಗೊಂಡಿದ್ದಾರೆ.

ಆನೆಗುಡ್ಡೆಗೆ ದೇವಳಕ್ಕೆ ನಟಿ ಮಾಲಾಶ್ರೀ ಭೇಟಿ

ಕುಂದಾಪುರ:ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಖ್ಯಾತ ಚಲನಚಿತ್ರ ನಟಿ ಮಾಲಾಶ್ರೀ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು.ದೇವಾಲಯದ ಆಡೆಳಿತ ಮೊಕ್ತೇಸರರು,ಅರ್ಚಕರು,ಆಡಳಿತ ಮಂಡಳಿ ಸದಸ್ಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.

You cannot copy content of this page