ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ-ಬೆಲೆ ಬಾಳುವ ಶ್ರೀಗಂಧದ ತುಂಡುಗಳು ವಶಕ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲ ಗ್ರಾಮದ ಕಾರಿಬೈಲು ಎಂಬಲ್ಲಿ ಸುಮಾರು 2.ಲಕ್ಷ.ರೂ ಮೌಲ್ಯದ ಶ್ರೀಗಂಧದ ಮರದ ತಂಡುಗಳನ್ನು ಕ್ಷೀಪ್ರ ಕಾರ್ಯಾಚರಣೆ ಮೂಲಕ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ.ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.ಬೆಳ್ಳಾಲ ಗ್ರಾಮದ ಕಾರಿಬೈಲು ಪರಿಸರದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಅನುಮಾನಾಸ್ಪದ ಪಟ್ಟ ಸ್ಥಳದಲ್ಲಿದ್ದ ಬೆಲೆಬಾಳುವ ಒಂದು ಶ್ರೀಗಂಧದ ಮರವನ್ನು ಆರೋಪಿಗಳು ಕಡಿದು ಸಾಗಾಟ ಮಾಡುವ ಹೊತ್ತಿನಲ್ಲಿ ಖಚಿತ ಮಾಹಿತಿ ಮೇರೆಗೆ ಡಿಸಿಎಫ್ ಉದಯ ಎಂ ನಾಯಕ್ ಅವರ ನಿರ್ದೇಶನದಂತೆ,ಎಸಿಎಫ್ ಕ್ಲಿಫರ್ಡ್ ಲೋಬೋ ಅವರ ಮಾರ್ಗದರ್ಶನದಲ್ಲಿ […]

ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ,ಅಭಿನಂದನಾ ಕಾರ್ಯಕ್ರಮ

ಕುಂದಾಪುರ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ವತಿಯಿಂದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಕುಂದಾಪುರ ಮೊಗವೀರ ಭವನದಲ್ಲಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ,ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕುಂದಾಪುರ ಆದರ್ಶ ಆಸ್ಪತ್ರೆ ಎಮ್.ಡಿ ಡಾ.ಆದರ್ಶ ಹೆಬ್ಬಾರ್ ಮಾತನಾಡಿ ಶಿಕ್ಷಣ, ಕ್ರೀಡೆ,ಕಲೆ,ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣವಾಗಿದೆ.ವಿದ್ಯಾರ್ಥಿಗಳು ಪೂರ್ವ ತಯಾರಿಯೊಂದಿಗೆ ಪರೀಕ್ಷೆಯನ್ನು ಎದುರಿಸಬೇಕೆಂದು ಶುಭ ಹಾರೈಸಿದರು.ಬ್ರಹ್ಮಾವರ ವಿದ್ಯಾಲಕ್ಷ್ಮೀ […]

ಗದ್ದೆಗಿಳಿದು ನಾಟಿ ಮಾಡಿದ ತಾಲೂಕು ಪಂಚಾಯಿತಿ ಇಒ-ಭಾರತಿ ಎನ್

ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಬೈಂದೂರು, ಗ್ರಾಮ ಪಂಚಾಯತ್ ಕಿರಿಮಂಜೇಶ್ವರ ಅವರ ಸಂಯುಕ್ತ ಆಶ್ರಯದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿತ್ರಾಡಿ ಯಲ್ಲಿ ಪಾಲಾಕ್ಷ ಸಂಜೀವಿನಿ ಒಕ್ಕೂಟದ ಮಹಿಳೆಯರು ಹಡಿಲು ಬಿದ್ದ ಭೂಮಿಯನ್ನು ನಾಟಿ ಮಾಡುವ ಮೂಲಕ ಕೃಷಿ ಭೂಮಿಗೆ ಜೀವ ಕಳೆ ತಂದಿದ್ದಾರೆ.ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಎನ್ ಅವರುಕರಾವಳಿ ಸಂಪ್ರದಾಯಕ ಶೈಲಿಯ ಹಾಳೆ ಟೋಪಿ ಧರಿಸಿ ಭತ್ತದ ನೇಜಿಯನ್ನು ವಿತರಿಸುವ ಮೂಲಕ […]

You cannot copy content of this page