ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ.ಕೆ ಭೇಟಿ

ಕುಂದಾಪುರ:ಬೈಂದೂರು ತಾಲೂಕಿನ ನೆರೆ ಪೀಡಿತ ಪ್ರದೇಶವಾದ ನಾವುಂದ ಸಾಲ್ಬುಡಕ್ಕೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ.ಕೆ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನೆರೆ ಬಾಧಿತ ಪ್ರದೇಶಗಳಲ್ಲಿ ಮುನನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ,ಆರ್.ಐ ಮಂಜು,ವಿ.ಎ ಸಂದೀಪ್ ಉಪಸ್ಥಿತರಿದ್ದರು.ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲ್ಬುಡ,ನಾವುಂದ ಹಾಗೂ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರುದ್ವೀಪ,ಹಡವು,ಪಡುಕೋಣೆ,ಚಿಕ್ಕಳ್ಳಿ,ಬಡಾಕೆರೆ […]

ಹಡಿಲು ಭೂಮಿಗೆ ಮರುಜೀವ,ಗದ್ದೆ ಉಳುಮೆ ಮಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಕುಂದಾಪುರ:ಚಿಕ್ಕ ಹಿಡುವಳಿ,ಕೂಲಿಕಾರರ ಸಮಸ್ಯೆ ಹಾಗೂ ಲಾಭದಾಯಕವಲ್ಲದ ಕಾರಣದಿಂದಾಗಿ ಜನರು ಕೃಷಿಯಿಂದ ವಿಮುಖರಾದ ಕಾರಣ ಸಾವಿರಾರು ಎಕರೆ ಭತ್ತದ ಗದ್ದೆಗಳು ಹಡಿಲು ಬಿದ್ದಿವೆ,ಹಡಿಲು ಭೂಮಿಗೆ ಮರುಜೀವ ನೀಡುವ ಉದ್ದೇಶದಿಂದ ಉಡುಪಿ ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಅವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಹಾಗೂ ಕೃಷಿ ಇಲಾಖೆಗಳ ಮೂಲಕ ಹಡಿಲು ಭೂಮಿಯನ್ನು ಕೃಷಿ ಮಾಡುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಒತ್ತು ನೀಡಿ,ಗ್ರಾಮ ಪಂಚಾಯತ್ ವಾರು ಗುರಿಯನ್ನು ನಿಗದಿಗೊಳಿಸಿ,ಅಧೀನ ಸಿಬ್ಬಂದಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಕಳೆದ ಎರಡು ತಿಂಗಳುಗಳಿಂದ […]

ಬಿರುಸುಗೊಂಡ ಮಳೆ,ನಾವುಂದ ಸಾಲ್ಬುಡದಲ್ಲಿ ಕೃಷಿ ಭೂಮಿಗಳು ಜಲಾವೃತ

ಕುಂದಾಪುರ:ಬೈಂದೂರು ತಾಲೂಕಿನ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಅಬ್ಬರಿಸುತ್ತಿರುವ ಮಳೆಯಿಂದ ಸೌಪರ್ಣಿಕಾ ನದಿಯಲ್ಲಿ ನೀರಿ ಮಟ್ಟ ಏರಿಕೆ ಆಗಿದ್ದರ ಪರಿಣಾಮ ನಾವುಂದ ಸಾಲ್ಬುಡದಲ್ಲಿ ಕೃಷಿ ಭೂಮಿಗಳು ಜಲಾವೃತಗೊಂಡಿದ್ದು,ಸಂಪರ್ಕ ರಸ್ತೆ ಮುಳುಗಡೆ ಆಗಿದೆ.ಸೌಪರ್ಣಿಕಾ ನದಿ ತೀರ ಪ್ರದೇಶಗಳಾದ ಸಾಲ್ಬುಡ,ಪಡುಕೋಣೆ,ಮರವಂತೆ,ಕಡಿಕೆ,ಹಡವು,ತೆಂಗಿನಗುಂಡಿ,ಸೇನಾಪುರ,ದೇವಳಿ,ಆನಗೋಡು,ಬಂಟ್ವಾಡಿ ಹಾಗೂ ಚಕ್ರ ನದಿ ತೀರ ಪ್ರದೇಶಗಳಾದ ಹಕ್ಲಾಡಿ ಗ್ರಾಮದ ಯಳೂರು,ತೊಪ್ಲು ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ. (ಮುನ್ನೆಚ್ಚರಿಕೆ ಕ್ರಮದ ಭಾಗವಾಗಿ ಬೈಂದೂರು ಅಗ್ನಿ ಶಾಮಕದಳದ ಸಿಬ್ಬಂದಿಗಳು […]

You cannot copy content of this page