ಪ್ರಕೃತಿ ವಿಕೋಪದಿಂದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶದಲ್ಲಿ ವ್ಯಾಪಕ ಹಾನಿ

ಕುಂದಾಪುರ:ಭಾರಿ ಗಾಳಿಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮದ ಎಲಿಜಾ ಪಿರೇರಾ ಅವರ ಮನೆ ಮಾಡಿನ ಮೇಲೆ ಮರ ಬಿದ್ದ ಪರಿಣಾಮ ಮೆನೆಗೆ ಭಾಗಶಃ ಹಾನಿ ಆಗಿದೆ.ಅಂದಾಜು 25,000 ಕ್ಕೂ ಅಧಿಕ ನಷ್ಟ ಸಂಭವಿಸಿದೆ.ನಾಡ ಗ್ರಾಮದ ರಾಮ ಆಚಾರಿ ಎನ್ನುವವರ ದನದ ಕೊಟ್ಟಿಗೆ ಮೇಲೆ ಮರ ಬಿದ್ದು ಸುಮಾರು 10,000.ರೂ ನಷ್ಟ ಉಂಟಾಗಿದೆ.ಕಂದಾಯ ಅಧಿಕಾರಿ ಸಂದೀಪ್ ಘಟನೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.ಪ್ರಕೃತಿ ವಿಕೋಪದಿಂದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶದಲ್ಲಿ ವ್ಯಾಪಕ ಹಾನಿ ಉಂಟಾಗಿದೆ.

ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ.ಕೆ ಭೇಟಿ

ಕುಂದಾಪುರ:ಬೈಂದೂರು ತಾಲೂಕಿನ ನೆರೆ ಪೀಡಿತ ಪ್ರದೇಶವಾದ ನಾವುಂದ ಸಾಲ್ಬುಡಕ್ಕೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ.ಕೆ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನೆರೆ ಬಾಧಿತ ಪ್ರದೇಶಗಳಲ್ಲಿ ಮುನನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ,ಆರ್.ಐ ಮಂಜು,ವಿ.ಎ ಸಂದೀಪ್ ಉಪಸ್ಥಿತರಿದ್ದರು.ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲ್ಬುಡ,ನಾವುಂದ ಹಾಗೂ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರುದ್ವೀಪ,ಹಡವು,ಪಡುಕೋಣೆ,ಚಿಕ್ಕಳ್ಳಿ,ಬಡಾಕೆರೆ […]

ಹಡಿಲು ಭೂಮಿಗೆ ಮರುಜೀವ,ಗದ್ದೆ ಉಳುಮೆ ಮಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಕುಂದಾಪುರ:ಚಿಕ್ಕ ಹಿಡುವಳಿ,ಕೂಲಿಕಾರರ ಸಮಸ್ಯೆ ಹಾಗೂ ಲಾಭದಾಯಕವಲ್ಲದ ಕಾರಣದಿಂದಾಗಿ ಜನರು ಕೃಷಿಯಿಂದ ವಿಮುಖರಾದ ಕಾರಣ ಸಾವಿರಾರು ಎಕರೆ ಭತ್ತದ ಗದ್ದೆಗಳು ಹಡಿಲು ಬಿದ್ದಿವೆ,ಹಡಿಲು ಭೂಮಿಗೆ ಮರುಜೀವ ನೀಡುವ ಉದ್ದೇಶದಿಂದ ಉಡುಪಿ ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಅವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಹಾಗೂ ಕೃಷಿ ಇಲಾಖೆಗಳ ಮೂಲಕ ಹಡಿಲು ಭೂಮಿಯನ್ನು ಕೃಷಿ ಮಾಡುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಒತ್ತು ನೀಡಿ,ಗ್ರಾಮ ಪಂಚಾಯತ್ ವಾರು ಗುರಿಯನ್ನು ನಿಗದಿಗೊಳಿಸಿ,ಅಧೀನ ಸಿಬ್ಬಂದಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಕಳೆದ ಎರಡು ತಿಂಗಳುಗಳಿಂದ […]

You cannot copy content of this page