ಹಾಲಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಕುಂದುಕೊರತೆಗಳ ಸಭೆ

ಕುಂದಾಪುರ:ಹಾಲಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಾಲಾಡಿ, ಮೊಳಹಳ್ಳಿ,ಹಾರ್ದಳ್ಳಿ- ಮಂಡಳ್ಳಿ,ಹೊಂಬಾಡಿ-ಮಂಡಾಡಿ,ಹೆಂಗವಳ್ಳಿ ಅಮಾಸೆಬೈಲ್ ಪಂಚಾಯತ್ ಗಳಿಗೆ ಸಂಭಂದಿಸಿದಂತೆ ಕುಂದುಕೊರತೆ ಸಭೆ ಹಾಲಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.15ನೇ ಹಣಕಾಸು,ನರೇಗಾ,ಜೆಎಂಜೆ ಸೇರಿದಂತೆ ವಿವಿಧ ಇಲಾಖೆಗಳ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು.ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರಿಗೆ ತಮ್ಮ ಇಲಾಖೆಯಡಿ ದೊರಕುವ ಸವಲತ್ತುಗಳ ಕುರಿತು ಮಾಹಿತಿ […]

ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಕುಂದಾಪುರ:ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಿಭಾಗದ ಪೆÇೀಷಕರ ಸಭೆ ನಡೆಯಿತು.ಪೋಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಬಗ್ಗೆ ತಿಳಸಿದರು.ಸಂಪನ್ಮೂಲ ವ್ಯಕ್ತಿ ಸುನಿಲ್ ಸ್ಪರ್ಧಾತ್ಮಕ ಪರೀಕ್ಷೆಗಳ ನೋಂದಾವಣೆಗೆ ವಿದ್ಯಾರ್ಥಿ ದಾಖಲೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ ಸ್ವಾಗತಿಸಿದರು.ಉಪನ್ಯಾಸಕ ಉದಯ್ ನಾಯ್ಕ್ ನಿರೂಪಿಸಿ,ವಂದಿಸಿದರು.

ಸಮುದ್ರದಲ್ಲಿ ನಾಪತ್ತೆ ಆದ ಯುವಕ,ಶವವಾಗಿ ಪತ್ತೆ

ಕುಂದಾಪುರ:ತ್ರಾಸಿ-ಮರವಂತೆ ಬೀಚ್‍ನಲ್ಲಿ ಸಮುದ್ರಕ್ಕೆ ಇಳಿದು,ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿ ಮಂಗಳವಾರ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವಂಡಿ ನಿವಾಸಿ ಫೀರಸಾಬ ನದಾಫ (22) ಎನ್ನುವ ಯುವಕ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸನ್ಯಾಸಿ ಬಲೇ ಎಂಬಲ್ಲಿ ಸಮುದ್ರ ತೀರದ ಬಳಿ ಬುಧವಾರ ಶವವಾಗಿ ಪತ್ತೆ ಆಗಿದ್ದಾನೆ.ಗಂಗೊಳ್ಳಿ ಠಾಣೆಯ ಪಿಎಸ್‍ಐ ಹರೀಶ್ ನಾಯ್ಕ್ ಮತ್ತು ಸಿಬ್ಬಂದಿಗಳು ಘಟನೆಯ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.24/7 ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಶವವನ್ನು ಶವಾಗಾರಕ್ಕೆ ಸಾಗಿಸಲು ಸಹರಿಸಿದರು.

You cannot copy content of this page