ಲಕ್ಷ್ಮೀನಾರಾಯಣ ದೇವಸ್ಥಾನ ಹೆಮ್ಮಾಡಿ,ಜೀರ್ಣೋದ್ಧಾರ ನಿಧಿ ಕುಂಭ ಸ್ಥಾಪನೆ

ಕುಂದಾಪುರ:ಹೆಮ್ಮಾಡಿ ಗ್ರಾಮದ ಗ್ರಾಮದೇವರಾದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಪ್ರಯುಕ್ತ ನಿಧಿ ಕುಂಭ ಸ್ಥಾಪನೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿ ವಿಧಾನದೊಂದಿಗೆ ಶನಿವಾರ ನಡೆಯಿತು.ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ನಿಮಿತ್ತ ಗ್ರಾಮಸ್ಥರು ನಿಧಿ ಸಮರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ತಂತ್ರಿಗಳಾದ ವಿಶೇಶ್ವರ ಸೋಮಯಾಜಿ,ಪ್ರದಾನ ಅರ್ಚಕರಾದ ನರಸಿಂಹ ಮೂರ್ತಿ ಹೊಳ್ಳ,ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಅಶೋಕ್ ಕುಮಾರ್ ಭಟ್,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತ್ಯನಾರಾಯಣ ರಾವ್,ಕಾರ್ಯದರ್ಶಿ ಹರೀಶ್ ಭಂಡಾರಿ,ಸಮಿತಿ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

ಗುಜ್ಜಾಡಿ:ಹದಗೆಟ್ಟ ಮಡಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆಗ್ರಹ

ಕುಂದಾಪುರ:ಗಂಗೊಳ್ಳಿ ಲೈಟ್‍ಹೌಸ್ ಬಳಿಯ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ ಮಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೆಸರು ರಾಡಿಯಿಂದ ಕೂಡಿದೆ,ದುರಾವಸ್ಥೆಯಿಂದ ಕೂಡಿದ ರಸ್ತೆಯಲ್ಲಿ ಸಾಗುವುದೆ ದುಸ್ತರವಾಗಿದೆ.ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕ್ಕೆನ್ನುವ ಹಲವಾರು ವರ್ಷಗಳ ಬೇಡಿಕೆ ಮರಿಚಿಕೆ ಆಗಿ ಉಳಿದಿದ್ದು,ಮೀನುಗಾರರಿಗೆ ಅನುಕೂಲಕರವಾಗಿರುವ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಸುಗುಣ ಆರ್.ಕೆ ವಿದ್ಯಾರ್ಥಿಗಳಿಗೆ ಸಂಸ್ಕೃತ ಪುಸ್ತಕ ಕೊಡುಗೆ

ಕುಂದಾಪುರ:ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜಿನ ಪಿ.ಯು.ಸಿ ವಿಭಾಗದ ವಿದ್ಯಾರ್ಥಿಗಳಿಗೆ ಸಂಸ್ಕೃತ ಪುಸ್ತಕಗಳನ್ನು ಕ್ಲಬ್ಬಿನ ಅಧ್ಯಕ್ಷ ಎಂ.ನಾಗೇಂದ್ರ ಪೈ ವಿತರಿಸಿದರು.ಕ್ಲಬ್ಬಿನ ಸದಸ್ಯರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಗಂಗೊಳ್ಳಿ ರೋಟರಿ ಕ್ಲಬ್ ಪರವಾಗಿ ಝೋನಲ್ ರೋಟರ್ಯಾಕ್ಟ್ ಕೋ-ಆರ್ಡಿನೇಟರ್ ಸುಗುಣ ಆರ್.ಕೆ. ಅವರು ಸುಮಾರು 10 ಸಾವಿರ ರೂ. ಮೌಲ್ಯದ ಸಂಸ್ಕೃತ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

You cannot copy content of this page