ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ:ಅಣ್ಣನ ಸಾವು
ಮಂಗಳೂರು:ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ.ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು,ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.







































































































































































































































































































































































































































































































































































































































































































































































































































































































































































































































































































































































































































































































































































































































































