ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.ದುರ್ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಪಾರಾಗಿದ್ದಾನೆ.ಹೊಸಹಿತ್ಲು ನುಕ್ಕಿತಾರು ಉದಯ ದೇವಾಡಿಗ ಅವರ ಪುತ್ರ ಆಶಿಶ್ ದೇವಾಡಿಗ,ಹೊಸಹಿತ್ಲು ನುಕ್ಕಿತಾರು ಮಾರುತಿ ಪೂಜಾರಿ ಅವರ ಪುತ್ರ ಸೂರಜ್ ಪೂಜಾರಿ,ಹೊಸಹಿತ್ಲು ನುಕ್ಕಿತಾರು ಸುದಾಕರ ದೇವಾಡಿಗ ಅವರ ಪುತ್ರ ಸಂಕೇತ್ ದೇವಾಡಿಗ ಮೃತಪಟ್ಟಿರುವ ವಿದ್ಯಾರ್ಥಿಗಳಾಗಿದ್ದಾರೆ.ಮಂಗಳವಾರ 5.30 ರ ಸುಮಾರಿಗೆ ನಾಲ್ವರು […]

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಕನ್ನಡ ಪ್ರಾಧಾಯ್ಯಪಕಿ ಶಾಲಿನಿ ಕಾರ್ಯಕ್ರಮವನ್ನು ಉದ್ಘಾಸಿ ಮಾತನಾಡಿ,ಶಿವರಾಮ ಕಾರಂತರ ‘ಸರಸಮ್ಮನ ಸಮಾಧಿ’ ಮತ್ತು ಕುವೆಂಪುರವರ ‘ಮಲೆಗಳಲ್ಲಿ ಮದುಮಗಳು,’ಕಾನೂನು ಹೆಗ್ಗಡತಿ’ ಈ ಕಾದಂಬರಿಗಳಲ್ಲಿ ಕವಿ ಚಿತ್ರಿಸಿರುವ ಸ್ತ್ರೀ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಗಳನ್ನು ನೀಡಿದರು.ವಿದ್ಯಾಲಕ್ಷ್ಮೀ ಕಾಲೇಜಿನ ಸಂಸ್ಥಾಪಕರಾ ಸುಬ್ರಹ್ಮಣ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾಲೇಜಿನ ಆಡಳಿತಧಿಕಾರಿ ಮಮತಾ,ಪ್ರಿನ್ಸಿಪಾಲ್ ಸೀಮಾ ಭಟ್,ವೈಸ್ ಪ್ರಿನ್ಸಿಪಾಲ್ ಸುಜಾತಾ.ಸಾಂಸ್ಕøತಿಕ ಸಮಿತಿ […]

ಚಿನ್ನವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಗಂಗೊಳ್ಳಿ ಠಾಣೆ ಸಿಬ್ಬಂದಿ

ಕುಂದಾಪುರ:ಎಸ್‍ಬಿಐ ಬ್ಯಾಂಕ್ ಬಳಿ ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಗಂಗಾಧರ ಪೂಜಾರಿ ಅವರಿಗೆ ಸಿಕ್ಕಿರುವ ಸುಮಾರು 13 ಗ್ರಾಂ ತೂಕವನ್ನು ಹೊಂದಿದ ಅಂದಾಜು ಒಂದೂವರೆ ಲಕ್ಷ ರೂ. ಮೌಲ್ಯದ ಚಿನ್ನವನ್ನು ವಾರೀಸುದಾರರಾದ ಕುಂದಾಪುರ ಚಿಕ್ಕನ್ ಸಾಲ್ ರೋಡ್ ನಿವಾಸಿ ರಾಕೇಶ್ ಬೆರಟ್ಟೊ ಅವರಿಗೆ ಮರಳಿಸುವುದರ ಮುಖೇನ ಪ್ರಾಮಾಣಿಕತೆ ಮೆರೆದಿದ್ದಾರೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಪವನ್ ನಾಯ್ಕ್ ಹಸ್ತಾಂತರ ಮಾಡಿದರು.

You cannot copy content of this page