ಗಂಗೊಳ್ಳಿ:ಮಳೆಗೆ ಮನೆ ಕುಸಿದು ಬಿದ್ದು ಹಾನಿ

ಕುಂದಾಪುರ:ಗುರುವಾರ ಬೀಸಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲರ್ ಬೆಟ್ಟು ನಿವಾಸಿ ರೇಖಾ ಖಾರ್ವಿ ಅವರ ಮನೆ ಕುಸಿದು ಬಿದ್ದು ಅಂದಾಜು 10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ನಡಿದಿದೆ.ಗಂಗೊಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುರುದ್ವೀಪ ಪ್ರದೇಶದಲ್ಲಿ ಮತ್ತೆ ನೆರೆ

ಕುಂದಾಪುರ:ಬುಧವಾರ ದಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುದ್ವೀಪ ಪ್ರದೇಶದಲ್ಲಿ ಗುರುವಾರ ಮತ್ತೆ ನೆರೆ ನೀರು ಆವರಿಸಿದ್ದು.ಆಳೆತ್ತರದ ನೀರು ಮನೆಯನ್ನು ಆವರಿಸಿದೆ.ಹದಿನೈದು ದಿನಗಳಿಂದ ನಿರಂತರವಾಗಿ ನೆರೆ ಕಾಣಿಸಿಕೊಂಡಿದ್ದರಿಂದ ದ್ವೀಪ ವಾಸಿಗಳ ನಿದ್ದೆ ಹಾಳು ಗೇಡವಿದೆ.ಆತಂಕದಲ್ಲೆ ಜೀವನವನ್ನು ಸಾಗಿಸುವಂತೆ ಆಗಿದೆ.

ನಾಡ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿಗೆ ಸನ್ಮಾನ

ಕುಂದಾಪುರ:ಶ್ರೇಷ್ಠ ವೈದ್ಯ ಪ್ರಶಸ್ತಿ ಪಡೆದ ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ ಅವರನ್ನು ಬಿಲ್ಲವ ಫ್ರೆಂಡ್ಸ್ ನಾಡ ವತಿಯಿಂದ ನಾಡ ಪಂಚಾಯಿತಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಸ್.ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ,ಮಾಜಿ ತಾ.ಪಂ ಸದಸ್ಯ ಜಗದೀಶ್ ಪೂಜಾರಿ,ಶೇಖರ್ ಮಾಸ್ಟರ್,ಬಿಲ್ಲವ ಸಂಘ ಬೈಂದೂರು ಅಧ್ಯಕ್ಷ ಗಣೇಶ್ ಪೂಜಾರಿ,ವಾಸು ಪೂಜಾರಿ,ಉದಯ ಪೂಜಾರಿ,ಕ್ರಷ್ಣ ಪೂಜಾರಿ,ಸಂದೀಪ್ ಪೂಜಾರಿ ಉಪಸ್ಥಿತರಿದ್ದರು.ಗಿರೀಶ್ ಬಿಲ್ಲವ ಸ್ವಾಗತಿಸಿದರು.ರವಿ ಪೂಜಾರಿ ಬಡಾಕೆರೆ […]

You cannot copy content of this page