ಅಬ್ಬರಿಸಿದ ಪುಷ್ಯ ಮಳೆ,ಸೌಪರ್ಣಿಕಾ ನದಿ ತೀರ ಪ್ರದೇಶ ಜಲಾವೃತ್ತ

ಬೈಂದೂರು:ಧಾರಾಕಾರವಾಗಿ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಬೋರರ್ಗೆರೆದು ತುಂಬಿ ಹರಿದ ಪರಿಣಾಮ ಬೈಂದೂರು ತಾಲೂಕಿನ ನಾವುಂದ ಸಾಲ್ಬುಡ ಮತ್ತು ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಳ್ಳಿಯಲ್ಲಿ ನೆರೆ ನೀರು ಆವರಿಸಿದೆ.ಕೃಷಿ ಭೂಮಿಗಳು ನೀರಿನಲ್ಲಿ ಮೂಳುಗಿದ್ದು ಅಪಾರ ಹಾನಿ ಗುರುವಾರ ಸಂಭವಿಸಿದೆ.ಜೀವನ ಅಸ್ತವ್ಯಸ್ಥವಾಗಿದೆ.ಮನೆ ಒಳಗೆ ನೀರು ನುಗ್ಗಿದ್ದ ಪರಿಣಾಮ ಜನರಿಗೆ ಬಹಳಷ್ಟು ತೊಂದರೆ ಉಂಟಾಗಿದೆ.ಪ್ರತಿ ಮಳೆಗಾಲದಲ್ಲಿಯೂ ಸೌಪರ್ಣಿಕಾ ನದಿ ತೀರ ಪ್ರದೇಶವಾದ ಸಾಲ್ಬುಡ,ಚಿಕ್ಕಳ್ಳಿ,ಹೊಸಾಡು,ತ್ರಾಸಿ,ಕಡಿಕೆ,ಬಡಾಕೆರೆ ಭಾಗದಲ್ಲಿ ನೆರೆ ಕಾಣಿಸಿಕೊಳ್ಳುತ್ತದೆ.ನೆರೆ ನೀರಿನಿಂದ ಜನವಸತಿ ಪ್ರದೇಶ ಮತ್ತು ಕೃಷಿ ಭೂಮಿಗಳು ಮುಳುಗಡೆ […]

ಹೇರಂಜಾಲುನಲ್ಲಿ ಶೆಫ್‍ಟಾಕ್ ನ್ಯೂಟ್ರಿಪುಡ್ಸ್ ಪ್ರೈವೇಟ್ ಲಿಮಿಟೆಡ್ ಚಿಕ್ಕಿ,ಚಕ್ಕುಲಿ ಘಟಕ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಹೇರಂಜಾಲುನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮಾಜ ಸೇವಕ ಉದ್ಯಮಿ ಡಾ.ಗೋವಿಂದ ಬಾಬು ಪೂಜಾರಿ ಅವರ ಮಾಲೀಕತ್ವದ ಶೆಫ್‍ಟಾಕ್ ನ್ಯೂಟ್ರಿಪುಡ್ಸ್ ಪ್ರೈವೇಟ್ ಲಿಮಿಟೆಡ್ ಚಿಕ್ಕಿ,ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮ ಶನಿವಾರ ಅದ್ದೂರಿಯಾಗಿ ನಡೆಯಿತು. ಗೌರಿಗದ್ದೆ ಆಶ್ರಮ ಅವಧೂತ ಶ್ರೀ ವಿನಯ್ ಗುರೂಜಿ ಅವರು ಚಿಕ್ಕಿ ಉತ್ಪನವನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿ ಮಾತನಾಡಿ,ಮಹಿಳೆಯರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಬ್ರಹ್ಮಶ್ರೀ ನಾರಾಯಣ ಗುರು ಅವರು ತೆಂಗಿನ ನಾರಿನಿಂದ ಹಗ್ಗವನ್ನು ಕಟ್ಟಿ ಕೊಡುವ ಕಾಯಕಕ್ಕೆ ಮುನ್ನುಡಿಯನ್ನು […]

ಆಲೂರು – ನೂಜಾಡಿಗೆ ಸರಕಾರಿ ಬಸ್ ಕಲ್ಪಿಸುವಂತೆ ಆಗ್ರಹ

ಕುಂದಾಪುರ:ಸ್ತ್ರೀ ಸಾಮಾನ್ಯರು ಕೂಲಿ ಕಾರ್ಮಿಕರು ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಿನಂಪ್ರತಿ ದೂರದ ಕುಂದಾಪುರ ಪೇಟೆಗೆ ತೆರಳುತ್ತಾರೆ.ಜನ ಸಂಖ್ಯೆಗೆ ಅನುಗುಣವಾಗಿ ಆಲೂರು-ಗುಡ್ಡೆಯಂಗಡಿ ಮಾರ್ಗದಲ್ಲಿ ಬಸ್‍ಗಳು ಓಡಾಟ ಮಾಡದೆ ಇದ್ದಿದ್ದರಿಂದ ಹಳ್ಳಿ ಭಾಗದ ಜನರಿಗೆ ಬಹಳಷ್ಟು ತೊಂದರೆ ಆಗುತ್ತಿದೆ.ವಿದ್ಯಾರ್ಥಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ಸಂಕಷ್ಟವನ್ನು ತಪ್ಪಿಸಲು ಆಲೂರು ಗುಡ್ಡೆಯಂಗಡಿ ಭಾಗಕ್ಕೆ ಸರಕಾರಿ ಬಸ್ ಓಡಿಸಲು ಕೂಡಲೆ ಕ್ರಮ ಕೈಗೊಳ್ಳಬೇಕೆಂದು ರಾಜು ಪಡುಕೋಣೆ ಆಗ್ರಹಿಸಿದರು.ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಆಲೂರು,ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಆಲೂರು,ಕರ್ನಾಟಕ […]

You cannot copy content of this page