ಮೇಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಹಬ್ಬ

ಕುಂದಾಪುರ:ಬೈಂದೂರು ತಾಲೂಕಿನ 11ನೇ ಉಳ್ಳೂರು ಮೂಡುಮರ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಮೇಕೋಡು ವಾರ್ಷಿಕ ಹಬ್ಬ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶನಿವಾರ ವಿಜೃಂಭಣೆಯಿಂದ ನಡೆಯಿತು.ಅಮ್ಮನವರ ವಾರ್ಷಿಕ ಹಬ್ಬದ ಪ್ರಯುಕ್ತ ಚಂಡಿಕಾಹೋಮ,ಕಲಶಾಭಿಷೇಕ,ಮಹಾಮಂಗಳಾರತಿ,ಪಂಚವಿಂಶತಿ ಕಲಶಸ್ಥಾಪನೆ,ಕಲಾತತ್ವಹೋಮ,ಅಧಿವಾಸಹೋಮ,ಗಣಪತಿ ಪ್ರಾರ್ಥನೆ,ಮಹಾ ಅನ್ನಸಂತರ್ಪಣೆ, ಹಾಗೂ ಪೆರ್ಡೂರು ಮೇಳದವರಿಂದ ಯಕ್ಷಗಾನ ಕಾರ್ಯಕ್ರಮ ಜರುಗಿತು.ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರಿಗೆ ಹರಕೆಯನ್ನು ಸಲ್ಲಿಸಿ ಅನ್ನಪ್ರಸಾದ ಸ್ವೀಕರಿಸಿದರು.ಮೇಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ,ಸುಮಾರು 45 ವರ್ಷಗಳಿಂದ ದಾನಿಗಳು ಹಾಗೂ ಭಕ್ತರ ಸಹಕಾರದಿಂದ ವಾರ್ಷಿಕ ಹಬ್ಬವನ್ನು ಬಹಳ […]

ಎಂಟು ವರ್ಷದ ಬಳಿಕ ತವರಿಗೆ ಮರಳಿದ ಜಿಂಕು

ಉಡುಪಿ:ಕಳೆದ ನಾಲ್ಕು ತಿಂಗಳ ಹಿಂದೆ ಕುಂದಾಪುರ ತಾಲೂಕಿನ ತ್ರಾಸಿ,ಮುಳ್ಳಿಕಟ್ಟೆ ಪರಿಸರದಲ್ಲಿ ಅಡ್ಡಾಡುತ್ತಿದ್ದ ಉತ್ತರ ಪ್ರದೇಶದ ಮೆಹದಾವಲ್ ಜಿಲ್ಲೆ ನಿವಾಸಿ ಮಾನಸಿಕ ಅಸ್ವಸ್ಥ ಜಿಂಕು (ಸುನಿಲ್) ಎಂಬಾತ ಯುವಕ ಮಂಜೇಶ್ವರ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖ ಗೊಂಡು ಎಂಟು ವರ್ಷದ ಬಳಿಕ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾನೆ.ಘಟನೆ ವಿವರ:ಜನವರಿ.25 ರಂದು ತ್ರಾಸಿ ಬೀಚ್ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಕೈಯಲ್ಲಿ ಒಂದು ಚೀಲ ಹಿಡಿದುಕೊಂಡು ಹರಿದ ಬಟ್ಟೆ ಧರಿಸಿದ ಮಾನಸಿಕ ಅಸ್ವಸ್ಥನೊಬ್ಬನು ನಡೆದು ಕೊಂಡು […]

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಜನ್ಮದಿನಾಚರಣೆ,ಸಮೃದ್ಧ ಹಸಿರು ಕಾರ್ಯಕ್ರಮ

ಕುಂದಾಪುರ:ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಜನುಮದಿನ ಅಂಗವಾಗಿ ಅವರ ಅಭಿಮಾನಿಗಳ ಬಳಗದ ವತಿಯಿಂದ ಕ್ಷೇತ್ರದಾದ್ಯಂತ ಸಮೃದ್ಧ ಹಸಿರು ಕಾರ್ಯಕ್ರಮ ಭಾನುವಾರ ನಡೆಯಿತು.ಸಮೃದ್ಧ ಹಸಿರು ಕಾರ್ಯಕ್ರಮದ ಅಂಗವಾಗಿ ಶಾಸಕರ ಅಭಿಮಾನಿಗಳು ನೂರಾರು ಗಿಡಗಳನ್ನು ನೆಟ್ಟು ಪರಿಸರ ಮೇಲಿನ ಕಾಳಜಿ ಮೆರೆದರು.ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಕ್ಷೇತ್ರದ ಹಲವೆಡೆರಕ್ತದಾನ ಶಿಬಿರ,ಸ್ವಚ್ಛತಾ ಕಾರ್ಯಕ್ರಮ,ಗಿಡ ನೆಡುವ ಕಾರ್ಯಕ್ರಮ,ಅಸಾಯಕರಿಗೆ ನೆರವು,ವ್ರದ್ಧಾಶ್ರಮ, ಅನಾಥಶ್ರಮ ಗಳಿಗೆ ನೆರವು ನೀಡುವುದಲ್ಲದೆ ಹಳ್ಳಿಗಳಲ್ಲಿ ದುರಸ್ಥಿಯಲ್ಲಿರುವ ಮನೆಗಳನ್ನು ಸರಿಪಡಿಸಿಕೊಡುವ ಕಾರ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಮೇಲ್ಚಾವಣಿ ಸರಿದೂಗಿಸುವ ಕಾರ್ಯಗಳನ್ನು […]

You cannot copy content of this page