ಧಾರ್ಮಿಕ ಸಭಾ ಕಾರ್ಯಕ್ರಮ ದಾನಿಗಳಿಗೆ ಸನ್ಮಾನ
ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ಕಿರಿಮಂಜೇಶ್ವರ ಗುಂಜಾನುಗುಡ್ಡೆ ಶ್ರೀ ಬೊಬ್ಬರ್ಯ ಪರಿವಾರ ದೇವರ ಪುನರ್ ಪ್ರತಿಷ್ಠೆ, ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಧಾರ್ಮಿಕ ಸಭಾ ಕಾರ್ಯಕ್ರಮ ಸೋಮವಾರ ನಡೆಯಿತು.ದಾನಿಗಳನ್ನು ಸನ್ಮಾನಿಸಲಾಯಿತು.ಸಾಂದೀಪನಿ ಸಾಧನಾಶ್ರಮ ಶ್ರೀಕ್ಷೇತ್ರ ಕೇಮಾರು ಶ್ರೀ ಪರಮ ಪೂಜ್ಯ ಈಶವಿಠಲದಾಸ ಸ್ವಾಮಿ ಅವರು ಆಶೀರ್ವಚನಾ ನೀಡಿ ಮಾತನಾಡಿ,ಪಾಶ್ಚಿಮಾತ್ಯ ದೇಶದ ಸಂಸ್ಕøತಿಗೆ ಮಾರುಹೋಗದೆ ನಮ್ಮ ದೇಶದ ಸಂಸ್ಕøತಿಯನ್ನು ಅಳವಡಿಸಿಕೊಂಡು ಬದುಕುವುದರಿಂದ ಸಂಸ್ಕಾರಯುತವಾದ ಬದುಕನ್ನು ಕಂಡುಕೊಳ್ಳಬಹುದಾಗಿದೆ.ಮಾತೃ ಭಾಷಾ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕೆಂದು ಹೇಳಿದರು.ಧಾರ್ಮಿಕ ಮುಖಂಡ ಅಪ್ಪಣ್ಣ […]






























































































































































































































































































































































































































































































































































































































































































































































































































































































































































































































































































































































































































































































































































































































































































