ಶ್ರೀಲಕ್ಷ್ಮೀನಾರಾಯಣ ದೇವರ ಪುನರ್ ಪ್ರತಿಷ್ಠಾ ಮಹೋತ್ಸವ

ಕುಂದಾಪುರ:ತಾಲೂಕಿನ ಇತಿಹಾಸ ಪ್ರಸಿದ್ಧ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವರ ನೂತನ ಶಿಲಾಮಯಗುಡಿ ಲೋಕಾರ್ಪಣೆ ಹಾಗೂ ಶ್ರೀದೇವರ ಪುನರ್ ಪ್ರತಿಷ್ಠಾ ಮಹೋತ್ಸೊವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ವಿಜೃಂಭಣೆಯಿಂದ ನಡೆಯಿತು.ಶ್ರೀಲಕ್ಷ್ಮೀನಾರಾಯಣ ದೇವರ ಪುನರ್ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ಗುರುಗಣೇಶ ಪೂಜೆ,ಪುಣ್ಯಾಹವಾಚನ,ನವಗ್ರಹ ಧಾನ್ಯ ದಾನ,ಫಲದಾನ,ಜೀವಕುಭಾಭಿಷೇಕ,ಮಹಾಪ್ರಣ,ಪ್ರತಿಷ್ಠಾನ್ಯಾಸಾದಿಗಳು,ತತ್ತ್ವಕಲಶ ಸ್ಥಾಪನಾ,ಲಕ್ಷ್ಮೀನಾರಾಯಣ ಹೃದಯ ಹೋಮ,ಮಹಾಪೂಜಾ,ಪ್ರಸಾದ ವಿತರಣೆ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಶ್ರೀಲಕ್ಷ್ಮೀನಾರಾಯಣ ದೇವರಿಗೆ ಅಲಂಕಾರ ಪೂಜೆ ಮತ್ತು ಮಹಾಮಂಗಳಾರತಿ ಹಾಗೂ ಶಿಖರ ಪ್ರತಿಷ್ಠೆಯನ್ನು ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕುಂಭಾಭಿಷೇಕ […]

ಏಪ್ರಿಲ್ 23 ರಂದು ಬಗ್ವಾಡಿ ಶ್ರೀಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮರಥೋತ್ಸವ

ಕುಂದಾಪುರ:ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಏಪ್ರಿಲ್ 23 ರಂದು ಮಂಗಳವಾರ ವಿಜೃಂಭಣೆಯಿಂದ ನಡೆಯಲಿದೆ.ಶ್ರೀದೇವಿಯ ಬ್ರಹ್ಮರಥೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10 ಕ್ಕೆ ಮಹಿಳೆಯರಿಂದ ಸಾಮೂಹಿಕ ಕುಂಕಮಾರ್ಚನೆ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.ಸಂಜೆ 6 ರಿಂದ ಯಕ್ಷಗುರು ಪ್ರಸಾದ್ ಕುಮಾರ್ ಮೊಗೆಬೆಟ್ಟು ಸಾರಥ್ಯದಲ್ಲಿ ಟೀಮ್ ಮಸ್ತ್ಯಗಂಧ ಇವರಿಂದ ಶ್ರೀರಾಮ ದರ್ಶನಂ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.ಏಪ್ರಿಲ್ 24 ರಂದು ಕುಣಿತ ಭಜನೆ:ಏಪ್ರಿಲ್ 24 ರ […]

ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ರೂಟ್ ಮಾರ್ಚ್

ಕುಂದಾಪುರ:ಲೋಕ ಸಭಾ ಕ್ಷೇತ್ರ ಚುನಾವಣೆ ಹಿನ್ನೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ್ತು ನಿರ್ಭಿತಿ ಯಿಂದ ಚುನಾವಣೆ ನಡೆಯಲು ಪೊಲೀಸ್ ರೂಟ್ ಮಾರ್ಚ್ ಭಾನುವಾರ ಕುಂದಾಪುರದಲ್ಲಿ ನಡೆಯಿತು.ಕುಂದಾಪುರ ಪ್ರಮುಖ ಬೀದಿಗಳಲ್ಲಿ ಪೊಲೀಸ್ ರು ಪಥಸಂಚಲನವನ್ನು ನಡೆಸಿದರು.ಗುಜರಾತ ರಾಜ್ಯದ ಮೀಸಲು ಪಡೆ ಪೊಲೀಸ್ ಇನ್‍ಸ್ಪೆಕ್ಟರ್ ಅಶೀಕ್ ವಾಸವ ಮತ್ತು ಮೂವರು ಸಬ್ ಇನ್‍ಸ್ಪೆಕ್ಟರ್ ನೇತೃತ್ವದಲ್ಲಿ ಪೊಲೀಸ್ ರೂಟ್ ಮಾರ್ಚ್ ನಡೆಯಿತು.ಬೈಂದೂರು,ಗಂಗೊಳ್ಳಿ,ಕುಂದಾಪುರ ಗ್ರಾಮೀಣ,ಕುಂದಾಪುರ,ಅಮಾವಾಸ್ಯೆ ಬೈಲು,ಶಂಕರನಾರಾಯಣ ಠಾಣೆಗಳ 50 ಕ್ಕೂ ಅಧಿಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು,ಗುಜರಾತ ಪೊಲೀಸ್ ಸುಮಾರು 70 ಸಿಬ್ಬಂದಿಗಳು ಭಾಗವಹಿಸಿದ್ದರು.ನೆಹರು […]

You cannot copy content of this page