ವಿಶೇಷವಾಗಿ ರೈತರು,ಮೀನುಗಾರರು,ಕಾಫಿ ಬೆಳೆಗಾರರು ಕೈ ಹಿಡಿಯಲಿದ್ದಾರೆ-ಜಯಪ್ರಕಾಶ್ ಹೆಗ್ಡೆ

ಕುಂದಾಪುರ:ಉಡುಪಿ ಜಿಲ್ಲೆ ರಚನೆ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರ ಜತೆಗೆ ರೈತರು,ಮೀನುಗಾರರು,ಕಾಫಿ ಬೆಳೆಗಾರರಿಗೆ ಮಾಡಿದಂತಹ ಅನುಕೂಲತೆಗಳು ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚಿನ ಸಮಯದಲ್ಲಿ ತೊಡಗಿಸಿಕೊಂಡಿದ್ದರಿಂದ ಜನರು ನನ್ನನ್ನು ಬೆಂಬಲಿಸಿ ಮತವನ್ನು ನೀಡಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ವಿಶ್ವಾಸವನ್ನು ವ್ಯಕ್ತಪಡಿಸಿದರು.ಗುರುವಾರ ತಮ್ಮ ಸ್ವಗ್ರಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ತಮ್ಮ ಚುನಾವಣಾ ಪೂರ್ವ ತಯಾರಿ ಕುರಿತು ಹಾಗೂ ಜನರು ತಮ್ಮ ಮೇಲಿಟ್ಟಿರುವ ಪ್ರೀತಿ ವಿಶ್ವಾಸದ ಬಗ್ಗೆ ಮನದಾಳದ ಮಾತನ್ನು ಹಂಚಿಕೊಂಡರು.ಬ್ಲಾಕ್ ಸಮಿತಿಗಳನ್ನು ಆರಂಭಿಸಿಕೊಂಡು ಈಗಾಗಲೇ […]

ಶ್ರೀ ರಜತ ಕವಚ ಸಮರ್ಪಣೆ ಪುರಮೆರವಣಿಗೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದಲ್ಲಿ ಏಪ್ರಿಲ್ 10 ರಿಂದ ಏಪ್ರಿಲ್ 22 ರ ತನಕ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀರಾಮ ದೇವರಿಗೆ ಸಮರ್ಪಣೆ ಮಾಡಲಿರುವ ರಜತ ಕವಚ ಪುರ ಮೆರವಣಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು.ತ್ರಾಸಿ ಸರ್ಕಲ್ ನಿಂದ ಶ್ರೀರಾಮ ಮಂದಿರ ವರೆಗೆ ಭವ್ಯ ಮೆರವಣಿಗೆ ಸಾಗಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು, ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷರು ಮತ್ತು ಮಹಿಳಾ ಸಮಿತಿ ಅಧ್ಯಕ್ಷರು,ಸದಸ್ಯರು ಉಪಸ್ಥಿತರಿದ್ದರು.

ಹಸಿರು ಹೊರೆ ಕಾಣಿಕೆ ಸಮರ್ಪಣೆ

ಕುಂದಾಪುರ:ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ,ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್ 14 ರ ಭಾನುವಾರದಂದು ನಡೆಯಲಿರುವ ಅಷ್ಟಬಂಧ ನಾಗಮಂಡಲೋತ್ಸ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಅದ್ಧೂರಿಯಾಗಿ ಬುಧವಾರ ನಡೆಯಿತು.ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ಅವರು ಹಸಿರು ಹೊರೆ ಕಾಣಿಕೆ ಮೆರವಣಿಗೆ ಚಾಲನೆಯನ್ನು ನೀಡಿ ಮಾತನಾಡಿ,ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಕ್ಕೆ ಭಕ್ತಾಬಿಮಾನಿಗಳಿಂದ ತುಂಬು ಹೃದಯಿಂದ ಹೊರೆ ಕಾಣಿಕೆಯನ್ನು ಪಡೆದುಕೊಳ್ಳಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನಾಗಮಂಡಲ ಸೇವಾ ಕಾರ್ಯಕ್ರಮದಲ್ಲಿ […]

You cannot copy content of this page