ಬಿಜೆಪಿ ಪಕ್ಷದ ಕಾರ್ಯಕರ್ತರು ನನಗೆ ಶಕ್ತಿ ತುಂಬಿದ್ದಾರೆ:ಕೆ.ಎಸ್ ಈಶ್ವರಪ್ಪ

ಕುಂದಾಪುರ:ರಾಜ್ಯದಲ್ಲಿ ಕುಟುಂಬ ರಾಜಕಾರಣವನ್ನು ತೊಲಗಿಸಬೇಕು ಹಾಗೂ ಬಿಜೆಪಿ ಪಕ್ಷವನ್ನು ಶುದ್ಧೀಕರಣ ಮಾಡುವ ದೃಷ್ಟಿಯಿಂದ,ನೊಂದ ಕಾರ್ಯಕರ್ತರಿಗೆ ನ್ಯಾಯವನ್ನು ದೊರಕಿಸಿ ಕೊಡುವ ಉದ್ದೇಶದಿಂದ ನಾನು ಇವೊಂದು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ.ನೂರಕ್ಕೆ ನೂರು ತನ್ನ ಗೆಲುವು ನಿಶ್ಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ರಾಷ್ಟ್ರಭಕ್ತರ ಬಳಗ ಮಾಜಿ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ವಿಶ್ವಾಸವನ್ನು ವ್ಯಕ್ತಪಡಿಸಿದರು.ಕುಂದಾಪುರ ತಾಲೂಕಿನ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದಎಂಟು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಆರವತ್ತು […]

ತ್ರಾಸಿ:ಅಷ್ಟಬಂಧನ ಲೇಪನ,ಅನ್ನಸಂತರ್ಪಣೆ

ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಶ್ರೀರಾಮ,ಶ್ರೀಗಣಪತಿ,ಶ್ರೀಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.ಶ್ರೀದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಗುರುಣಪತಿ ಪೂಜೆ,ಸ್ವಸ್ತಿ ಪುಣ್ಯಾಹ ವಾಚನ,ಶ್ರೀರಾಮ,ಶ್ರೀಗಣಪತಿ,ಶ್ರೀಅಯ್ಯಪ್ಪ ಸ್ವಾಮಿ ದೇವರಿಗೆ ಅಷ್ಟಬಂಧನ ಲೇಪನ,ಕಲಾತತ್ವ ಹೋಮ,ಮಹಾಪೂಜೆ,ಶ್ರೀರಾಮ ದೇವರಿಗೆ ಅಷ್ಟೋತ್ತರ ಪರಿಕರ ಕಲಶ ಸಹಿತ ಬ್ರಹ್ಮ ಕಲಶ ಸ್ಥಾಪನೆ,ಶ್ರೀಗಣಪತಿ ಮತ್ತು ಶ್ರಿಅಯ್ಯಪ್ಪ ಸ್ವಾಮಿ ದೇವರಿಗೆ ಪಂಚವಿಂಶತಿ ಕಲಶ ಸ್ಥಾಪನೆ,ಅಧಿವಾಸ ಹೋಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕøತಿಕ ವೈಭವ,ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ […]

ಏಪ್ರಿಲ್.4 ರಿಂದ ಶ್ರೀರಾಮ ಶ್ರೀ ಗಣಪತಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ತ್ರಾಸಿ,ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಶ್ರೀರಾಮ,ಶ್ರೀ ಗಣಪತಿ,ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಏಪ್ರಿಲ್ 04 ರಿಂದ ಏಪ್ರಿಲ್ 05 ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಶ್ರೀ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್.04 ರಂದು ಗುರುವಾರ ಬ್ರಹ್ಮಕಲಶೋತ್ಸವ ವೈದಿಕ ವಿಧಾನ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ.ಏಪ್ರಿಲ್ 05 ರಂದು ಶುಕ್ರವಾರ ಶ್ರೀರಾಮ, ಶ್ರೀ ಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ವೇದ ಮೂರ್ತಿ ಡಾ.ಭರತ್ ಐತಾಳ್ ಉಳ್ಳೂರು […]

You cannot copy content of this page