ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಸ್ವರ್ಣಮುಖಿ ರಂಗ ಮಂದಿರದಲ್ಲಿ ಭರತನಾಟ್ಯ ದಿವ್ಯೋತ್ಸವ-ನೃತ್ಯಕಲೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಗುರುವಾರ ನಡೆಯಿತು.ದೇಗುಲದ ಪವಿತ್ರ ವಾತಾವರಣದ ಮಧ್ಯೆ,ವಿವಿಧ ಭಾಗಗಳಿಂದ ಬಂದ 20ಕ್ಕೂ ಹೆಚ್ಚು ಯುವ ಕಲಾವಿದರು ಭರತನಾಟ್ಯವನ್ನು ಭಕ್ತಿ,ಶಿಸ್ತು ಮತ್ತು ನೃತ್ಯಶೈಲಿಯೊಂದಿಗೆ ಪ್ರಸ್ತುತಪಡಿಸಿದರು.ದರ್ಶನಾರ್ಥಿಗಳು,ಪಾಲಕರು ಮತ್ತು ಕಲೆ ಪ್ರೇಮಿಗಳು ವೇದಿಕೆಯಲ್ಲಿ ಆಕರ್ಷಕ ಪ್ರದರ್ಶನಗಳಿಂದ ಮೋಹಿತರಾದರು.ರೇವತಿ ಶ್ರೀನಿವಾಸನ್ ಲಾಲಿತ್ಯಭರಿತ ನಿರೂಪಣೆಯಿಂದ ಕಾರ್ಯಕ್ರಮ ನಡೆಸಿಕೊಟ್ಟರು.ನೃತ್ಯ ಬಿಂಬ ಪ್ರತಿಷ್ಠಾನ […]

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ ಶಕ್ತಿ ಸಮಾವೇಶ ಜೂನ್.29 ರಂದು ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ.ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಕಾರ್ಯಕ್ರಮ ಉದ್ಘಾಟಿಸಲಿದ್ದು,ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ ಗಿಳಿಯಾರು ಅಧ್ಯಕ್ಷತೆ ವಹಿಸಲಿದ್ದಾರೆ.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದು.ಅತಿಥಿಗಣ್ಯರು ಇವೊಂದು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ ಶ್ರೀ ವಿದ್ಯಾಭಿನವ ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿಗಳು ಭಾನುವಾರ ಭೇಟಿ ನೀಡಿ ಶ್ರೀ ದೇವರಿಗೆ ಕಲಶಾಭಿಷೇಕ ಸಹಿತ ಮಹಾಪೂಜೆಯನ್ನು ನೆರವೇರಿಸಿದರು.ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

You cannot copy content of this page