ಹೆಮ್ಮಾಡಿ:ರೋಗ ಬಾಧೆಯಿಂದ ತೆಂಗು ಬೆಳೆ ತತ್ತರ

ಕುಂದಾಪುರ:ತಾಲೂಕಿನ ಕನ್ನಡ ಕುದ್ರು ಹಾಗೂ ಮುವತ್ತು ಮುಡಿ ಭಾಗದಲ್ಲಿ ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗದಿಂದ ತೆಂಗಿನ ಗರಿಗಳು ಸುಳಿ ತನಕ ಕೆಂಪಾಗಿ ಕರಟಿ ಹೋಗಿದೆ.5 ರಿಂದ 6 ಸಾವಿರಕ್ಕೂ ಅಧಿಕ ತೆಂಗಿನ ಮರಗಳು ರೋಗ ಬಾಧೆಯಿಂದ ತತ್ತರಿಸಿದ್ದು ರೈತರು ಆತಂಕಿತರಾಗಿದ್ದಾರೆ.ತೆಂಗಿನ ಮರಕ್ಕೆ ಅಂಟಿಕೊಂಡಿದ್ದ ರೋಗ ಬಾಧೆಯನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳ ಬೇಕೆಂದು ರೈತರು ಆಗ್ರಹಿಸಿದ್ದಾರೆ.ಹಸಿರಿನಿಂದ ಕಂಗೊಳಿಸುತ್ತಿದ್ದ ತೆಂಗಿನ ಮರದ ಗರಿಗಳು ಇದ್ದಕ್ಕಿದಂತೆ ಸುಳಿ ತನಕ ಕೆಂಪಾಗಿ ಕರಟಿ ಒಣಗಿ ಜೊತು ಬೀಳುತ್ತಿದೆ.ತೆಂಗಿನ ಮರದಲ್ಲಿ ಹಸಿರಿನ […]

ಹೋಮ್ ಮೇಡ್ ಚಾಕಲೇಟ್ ತರಬೇತಿ ಸಮಾರೋಪ

ಕುಂದಾಪುರ:ರಾಷ್ಟೀಯ ಕೃಷಿ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಮತ್ತು ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಪ್ರಾಯೋಜಕತ್ವದಲ್ಲಿ ಹಾಗೂ ಹೊಸಾಡು ಗ್ರಾಮ ಪಂಚಾಯಿತಿ ಮತ್ತು ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಹೊಸಾಡು ಸಹಭಾಗಿತ್ವದಲ್ಲಿ ಹತ್ತು ದಿನಗಳ ಕಾಲ ಹೊಸಾಡು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಹೋಮ್ ಮೇಡ್  ಚಾಕಲೇಟ್ ಮತ್ತು ಬೇಕರಿ ತಿನಿಸುಗಳ ತಯಾರಿ ಉತ್ಪನ್ನಗಳ ತರಬೇತಿ ಸಮಾರೋಪ ಕಾರ್ಯಕ್ರಮ ಶನಿವಾರ ನಡೆಯಿತು.ಕುಂದಾಪುರ ತಾಲೂಕು ಪಂಚಾಯಿತಿ ಇಒ ಶಶಿಧರ,ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಯತೀಶ್,ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಯಶೋಧ,ಚಿತ್ತಾರ ಸಂಜೀವಿನಿ ಒಕ್ಕೂಟ […]

ಕಂಪ್ಯೂಟರ್ ತರಗತಿ ಕೋಣೆ ಉದ್ಘಾಟನೆ

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮ ಸರಳವಾಗಿ ಶುಕ್ರವಾರ ನಡೆಯಿತು.ಆಭರಣ ಪೌಂಡೇಶನ್ ಶ್ರೀರಂಗನಾಥ್ ಅವರು ಕಂಪ್ಯೂಟರ್ ತರಗತಿ ಕೋಣೆಯನ್ನು ಉದ್ಘಾಟಿಸಿ ಶುಭಹಾರೈಸಿದರು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಮಂಜುನಾಥ್ ಪುತ್ರನ್,ಶತಮಾನೋತ್ಸವ ಸಮಿತಿ ಅಧ್ಯಕ್ಷ ರಾಜೀವ ಶೆಟ್ಟಿ,ನಿವೃತ್ತ ಐಎಎಸ್ ಅಧಿಕಾರಿ ಬಿ.ಎನ್ ಶೆಟ್ಟಿ,ನಿವೃತ್ತ ಬ್ಯಾಂಕ್ ಅಧಿಕಾರಿ ಸೂಲಿಯಣ್ಣ,ಪುರೋಹಿತರಾದ ಮಂಜುನಾಥ್ ಭಟ್ ಹರೇಗೋಡು,ಎಸ್‍ಡಿಎಂಸಿ ಸದಸ್ಯರು,ಹಳೆ ವಿದ್ಯಾರ್ಥಿಗಳು,ಅಂಗನವಾಡಿ ಕಾರ್ಯಕರ್ತೆಯರು,ಶಿಕ್ಷಕವೃಂದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಶೈಲಜಾ ಶೆಟ್ಟಿ ಸ್ವಾಗತಿಸಿದರು.ಗೌರವ ಶಿಕ್ಷಕಿ ಸ್ವಾತಿ ನಿರೂಪಿಸಿದರು.ಸಹಶಿಕ್ಷಕಿ ಸತ್ಯವತಿ ವಂದಿಸಿದರು.ಆಭರಣ ಪೌಂಡೇಶನ್‍ನ […]

You cannot copy content of this page