ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನ ಹೊಳ್ಮಗೆ ವಾರ್ಷಿಕ ಗೆಂಡ ಸೇವೆ

ಕುಂದಾಪುರ:ಹೊಳ್ಮಗೆ ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ವಿಜೃಂಭಣೆಯಿಂದ ನಡೆಯಿತು.ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಹಬ್ಬದ ಅಂಗವಾಗಿ ಶ್ರೀ ದೇವರಿಗೆ ಮಹಾ ಮಂಗಳಾರತಿ ಸೇವೆ,ಹಣ್ಣು ಕಾಯಿ ಸೇವೆ,ಗೆಂಡ ಸೇವೆ,ಯಕ್ಷಗಾನ ಸೇವೆ,ದೈವ ದರ್ಶನ ಸೇವೆ,ಪಾಣರಾಟ ಸೇವೆ,ತುಲಾಭಾರ ಸೇವೆ,ವಿಶೇಷ ಪೂಜೆ ಜರುಗಿತು.ವಾರ್ಷಿಕ ಹಬ್ಬದ ಪ್ರಯುಕ್ತ ದೈವಸ್ಥಾನವನ್ನು ಪುಷ್ಪಾಲಂಕಾರ ಹಾಗೂ ದೀಪಾಲಂಕಾರದಿಂದ ಶೃಂಗಾರಿಸಲಾಗಿತ್ತು.ಶ್ರೀಹೋರ್ ಬೊಬ್ಬರ್ಯ ದೈವಸ್ಥಾನ,ಶ್ರೀ ನೆತ್ರ ಹಾೈಗುಳಿ ಹಾಗೂ ಬಂಟರ ಗರಡಿ ದೈವಸ್ಥಾನದ ಮೂರು ದೈವಗಳು ಜೊತೆಯಾಗಿ ಕೊಡಿ […]

ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಸ್ಥಾನ ಹೊಳ್ಮಗೆ ವಾರ್ಷಿಕ ಹಬ್ಬ,ಗೆಂಡ ಸೇವೆ

ಕುಂದಾಪುರ:ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಗೆಂಡ ಸೇವೆ ಹಾಗೂ ಕೋಲ ಸೇವೆ,ಮಂಗಳಾರತಿ,ಹಣ್ಣುಕಾಯಿ ಸೇವೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ನಡೆಯಿತು.ದೈವವನ್ನು ನಂಬಿದ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರ್ಶನವನ್ನು ಪಡೆದು ಹರಕೆಯನ್ನು ಸಲ್ಲಿಸಿದರು.ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಗಳ ವಾರ್ಷಿಕ ಹಬ್ಬ ಪ್ರತಿ ವರ್ಷ ಮಾ.14 ರಂದು ಆಚರಣೆಗೊಳ್ಳುತ್ತದೆ.ಕ್ಷೇತ್ರವನ್ನು ನಂಬಿದ ಕುಟುಂಬಿಕರಾದ ಮುಂಬೈ ಉದ್ಯಮಿ ಮಂಜು ಪೂಜಾರಿ ಅವರು ಮಾತನಾಡಿ,ಅಜೀರ್ಣಾವಸ್ಥೆಯಲ್ಲಿದ್ದ ದೈವಸ್ಥಾನವನ್ನು ಇತ್ತಿಚೆಗೆ […]

ಹಟ್ಟಿಯಂಗಡಿ:ಧಾರ್ಮಿಕ ಸಭಾ ಕಾರ್ಯಕ್ರಮ ಮಹಾ ಅನ್ನಸಂತರ್ಪಣೆ

ಕುಂದಾಪುರ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ ,ಲಕ್ಷ ಮೋದಕ ಹವನ,ಶತ ಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮದ ಅಂಗವಾಗಿ ಬುಧವಾರ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಿ ಮಾತನಾಡಿ,ಕಾರವಳಿಯಲ್ಲಿರುವ ಅನೇಕ ಸನ್ನಿಧಾನಗಳು ಭಕ್ತರಿಗೆ ಭಕ್ತಿಯ ಸಿಂಚನವನ್ನು ಮಾಡುತ್ತಿವೆ.ನಮ್ಮ ಅನೇಕ ಸಿದ್ಧಾಂತಗಳು ಆಸ್ತಿಕ ಮನೋಭಾವನೆಗಳನ್ನು ಮೂಡಿಸುತ್ತವೆ.ನಾವು ಧರ್ಮ ಮಾರ್ಗ ದಿಂದ ನಡೆದರೆ […]

You cannot copy content of this page