ಹೊಸಾಡು:ಮನೆ ಮೇಲೆ ಅಡಿಕೆ ಮರ ಬಿದ್ದು ಹಾನಿ

ಕುಂದಾಪುರ:ಮಂಗಳವಾರ ಸುರಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಾಳುಮನೆ ಕಾಳಮ್ಮ ಎಂಬುವವರ ಮನೆ ಮಾಡಿನ ಮೇಲೆ ಅಡಿಕೆ ಮರ ಬಿದ್ದು ಸಿಮೆಂಟ್ ಸೀಟ್,ಪಕಾಸಿ,ಹೆಂಚು,ಡಿಟಿಎಚ್ ತುಂಡಾಗಿದೆ.ಘಟನೆಯಲಿ ಅಂದಾಜು 15 ಸಾವಿರ.ರೂ ನಷ್ಟ ಉಂಟಾಗಿದೆ.ಹೊಸಾಡು ವಿ.ಎ ಮತ್ತು ಉಗ್ರಾಣಿ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಮಳೆ ಅಬ್ಬರ,ಶಾಲೆ ದೇವಳ ಕೃಷಿ ಗದ್ದೆಗಳಿಗೆ ನುಗ್ಗಿದ ನೀರು

ಸಿದ್ದಾಪುರ:ಕಳೆದೆರೆಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣದ ಅಮಾಸೆಬೈಲ್ ಸಿದ್ದಾಪುರ ಹಳ್ಳಿಹೊಳೆ ಆಜ್ರಿ ಶಂಕರನಾರಾಯಣ ಅಂಪಾರು ಹೊಸಂಗಡಿ ಮುಂತಾದ ಕಡೆ ಮಳೆ ಅಬ್ಬರಕ್ಕೆ ಹಲವಾರು ವಿದ್ಯುತ್ ಕಂಬಗಳು ಬೃಹತಾಕಾರಾದ ಮರಗಳು ಧರೆಗುರುಳಿದ್ದು ಜನಸಂಚಾರಕ್ಕೆ ಅಡ್ಡಿಯಾಗಿದ್ದು ಸುತ್ತುವರಿದ ಸಂಚಾರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.ಘಾಟ್ ಪ್ರದೇಶದಿಂದ ಬಾರಿ ಮಟ್ಟದಲ್ಲಿ ನೀರು ಹರಿದು ಬರುತ್ತಿದ್ದು ನದಿ ಹಳ್ಳ ತೋಡುಗಳು ತುಂಬಿ ಹರಿದಿದ್ದು ಗದ್ದೆಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ ಇತ್ತಿಚೆಗೆ ಬಿತ್ತನೆ ಮಾಡಿದ ಭತ್ತ ಕೃಷಿಗಳು ಸಂಪೂರ್ಣ ಮಳೆ ಪಾಲಾಗಿವೆ.ಮನೆ ದೇವಸ್ಥಾನ ತೋಟಗಳಿಗೆ […]

ಶೃಂಗೇರಿ:ಗುರುನಮನ ಕಾರ್ಯಕ್ರಮ,ವಿದ್ವಾಂಸರಿಗೆ ಸನ್ಮಾನ

ಕುಂದಾಪುರ:ವೇದಾಭಿಮಾನಿಗಳು ಘನಪಾಠಿ ಲಕ್ಷ್ಮೀನಾರಾಯಣ ಭಟ್ ಅವರ ನೇತೃತ್ವದಲ್ಲಿ ಶೃಂಗೇರಿ ಶ್ರೀಮದ್ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಗುರುನಮನ ಕಾರ್ಯಕ್ರಮ ಶ್ರೀವಿಧುಶೇಖರ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಶೃಂಗೇರಿಯಲ್ಲಿ ನಡೆಯಿತು.ಶ್ರೀಗಳ ಗುರುನಮನ ಕಾರ್ಯಕ್ರಮದಲ್ಲಿ ಅಗ್ನಿಹೋತ್ರಿ ವಾಸುದೇವ ಜೋಗಳೇಕರ್ ಗೋಕರ್ಣ (ಋಗ್ವೇದ),ಅಗ್ನಿಹೋತ್ರಿ ನರಸಿಂಹ ಭಟ್ ಉಮ್ಮಚಗಿ (ಯಜುರ್ವೇದ) ಹಾಗೂ ರಾಮಮೂರ್ತಿ ಶ್ರೌತಿಗಳು ವಿದ್ಯಾರಣ್ಯಪುರ ಶೃಂಗೇರಿ (ಸಾಮವೇದ) ಅವರಿಗೆ ಫಲಪುಷ್ಪ ಸಹಿತ 4.50 ಲಕ್ಷ.ರೂ ನಗದು ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕುಂದಾಪುರ ತಾಲೂಕಿನ ಹೊಸಾಡು ಶ್ರೀ ಗಣೇಶ ಕ್ರೆಡಿಟ್ ಸೊಸೈಟಿ ಅಧ್ಯಕ್ಷ […]

You cannot copy content of this page