ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ

ಬೈಂದೂರು:ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ ಸೋಮವಾರ ಫಾರ್ಮ್ ಹೌಸ್ ಗುಡ್ಡೆಯಂಗಡಿ ತಗ್ಗರ್ಸೆಯಲ್ಲಿ ನಡೆಯಿತು.ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಎಸ್ ಟಿ ಮೋರ್ಚಾದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿ ಅಭಿವೃದ್ಧಿ ಮೂಲಕ ದೇಶದ ನಾನಾ ಪ್ರಗತಿಯನ್ನು ಹೆಚ್ಚಿಸಲು ಹಗಲಿರುಳು ಕೆಲಸ ಮಾಡುತ್ತಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ,ಬಿ.ವೈ ರಾಘವೇಂದ್ರ ಅವರಿಗೆ ಮತ ನೀಡಬೇಕೆಂದು ಕೇಳಿಕೊಂಡರು.ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿ,ಕೊಲ್ಲೂರು ಕಾರಿಡಾರ್ ಮೂಲಕ […]

ಕಾರು ಮತ್ತು ಲಾರಿ ನಡುವೆ ಅಪಘಾತ,ಐದು ಜನರಿಗೆ ಗಂಭೀರ ಗಾಯ

ಬೈಂದೂರು:ತಾಲೂಕಿನ ನಾವುಂದ ಅರೆಹೊಳೆ ಕ್ರಾಸ್‍ನಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಜನರು ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ.ಕುಂದಾಪುರ ಕಡೆಯಿಂದ ಗೋಕರ್ಣ ಕಡೆಗೆ ಸಾಗುತ್ತಿದ್ದ ಕಾರು ಅದೆ ಮಾರ್ಗದಲ್ಲಿ ಬೈಂದೂರು ಕಡೆಗೆ ಸಾಗುತ್ತಿದ್ದ ಲಾರಿ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸ್ಟೇಟ್‍ಬ್ಯಾಂಕ್ ಉದ್ಯೊಗಿಗಳಾದ ಚಿಕ್ಕಮಗಳೂರಿನ ನಿವಾಸಿ ಪ್ರತಾಪ,ಪ್ರೇಮ,ಪ್ರಜ್ವಲ್ ಅಂತೋನಿ,ಸುರೇಶ ಆಂಧ್ರಪ್ರದೇಶ,ವಿಘ್ನೇಶ ಹಟ್ಟಿಕುದ್ರು ಕುಂದಾಪುರ ಅವರು ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಿರಿಮಂಜೇಶ್ವರ 108 ವಾಹನದ […]

ಏಪ್ರಿಲ್ 22 ರಂದು ಮಹಿಳಾ ಸಮಾವೇಶ,ಬೂತ್ ಕಡೆಗೆ ಸಮೃದ್ಧಿ ನಡಿಗೆ

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಏಪ್ರಿಲ್ 22ರಂದು ಸೋಮವಾರ ಬೈಂದೂರಿಗೆ ಆಗಮಿಸಿ ದಿನವಿಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ವೈ.ರಾಘವೇಂದ್ರ ಅವರು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮೊದಲ ಬಾರಿಗೆ ಬೈಂದೂರಿಗೆ ಆಗಮಿಸುತ್ತಿದ್ದಾರೆ. ರಾಘವೇಂದ್ರ ಅವರನ್ನು ಸ್ವಾಗತಿಸಲು ಕಾರ್ಯಕರ್ತರು ಪದಾಧಿಕಾರಿಗಳು ಕಾತರರಾಗಿದ್ದಾರೆ.ಮಹಿಳಾ ಸಮಾವೇಶಎ.22ರ ಬೆಳಗ್ಗೆ 10.30ಕ್ಕೆ ಕಿರಿಮಂಜೇಶ್ವರ ಮೂಕಾಂಬಿಕಾ ಟಿಂಬರ್ ಮಿಲ್ ಸಮೀಪದಲ್ಲಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದಿಂದ ಹಮ್ಮಿಕೊಂಡಿರುವ ಮಹಿಳಾ ಸಮಾವೇಶದಲ್ಲಿ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿ […]

You cannot copy content of this page