ಹೇರೂರು:ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಜ್ವಲಂತ ಸಮಸ್ಯೆಗಳು ಅನಾವರಣ

ಕುಂದಾಪುರ:ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಬೈಂದೂರು ಹಾಗೂ ಹೇರೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಕ್ಕಳ ವಿಶೇಷ ಗ್ರಾಮಸಭೆ ಪ್ರಕೃತಿ ಮಡಿಲಲ್ಲಿ ಬುಧವಾರ ನಡೆಯಿತು.ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯಾಡಳಿತದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭಾರತಿ ಅವರು ಮಕ್ಕಳ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿ,ಗ್ರಾಮ ಪಂಚಾಯತ್ ಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಮಕ್ಕಳ ಗ್ರಾಮ ಸಭೆಯಲ್ಲಿ ಭಾಗವಹಿಸುವದರ […]

ಮರವಂತೆಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ,ಮಕ್ಕಳ ಹಬ್ಬ ಕಾರ್ಯಕ್ರಮ

ಕುಂದಾಪುರ:ಮಕ್ಕಳು ತಮ್ಮ ಪೋಷಕರೊಡನೆರೊಡನೆ ಹಂಚಿಕೊಳ್ಳಲು ಸಾಧ್ಯವಾಗದ ಸಮಸ್ಯೆಗಳನ್ನು ಮಕ್ಕಳ ಗ್ರಾಮ ಸಭೆಯಲ್ಲಿ ಹಂಚಿಕೊಂಡಿದ್ದಾರೆ.ಸಾಮಾಜಿಕ ಕಳಕಳಿಯಿಂದ ಮಕ್ಕಳು ವ್ಯಕ್ತಪಡಿಸಿದ ಸಮಸ್ಯೆಗಳನ್ನು,ಅವರ ಬೇಡಿಕೆಗಳನ್ನು ನೂರಕ್ಕೆ ನೂರಷ್ಟು ಈಡೇರಿಕೆ ಮಾಡಲು ಪ್ರಯತ್ನಿಸಲಾಗುವುದು. ಮಗುವಿನ ಗ್ರಹಿಕೆಯನ್ನು ಅವರೊಳಗೆ ಅಡಗಿರುವ ಸಮಸ್ಯೆಗಳನ್ನು ಅಧ್ಯಾಯನ ಮಾಡಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಪ್ರಯೋಜನಕಾರಿ ಆಗುತ್ತದೆ ಎಂದು ಬೈಂದೂರು ಕಾರ್ಯನಿರ್ವಹಣಾಧಿಕಾರಿ ಭಾರತಿ ಹೇಳಿದರು. ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಬೈಂದೂರು,ಗ್ರಾಮ ಪಂಚಾಯತ್ ಮರವಂತೆ ಅವರ ಸಂಯುಕ್ತ ಆಶ್ರಯದಲ್ಲಿ ಮರವಂತೆ ಕಡಲ ತೀರದಲ್ಲಿ ಮಂಗಳವಾರ ನಡೆದ ಮಕ್ಕಳ ವಿಶೇಷ […]

ಗಂಗೊಳ್ಳಿ:ಪೋಸ್ಟರ್ ಅಳವಡಿಸಿ ಪ್ರತಿಭಟನೆ

ಕುಂದಾಪುರ:ಗಂಗೊಳ್ಳಿ ಪಂಜುರ್ಲಿ ದೇವಸ್ಥಾನದ ಸಮೀಪ ಹಾದು ಹೋಗಿರುವ ಚರಂಡಿಯನ್ನು ಅಭಿವೃದ್ಧಿಗೊಳಿಸಲು ಆಗ್ರಹಿಸಿ ಗಂಗೊಳ್ಳಿ ಕಳುಹಿನ ಬಾಗಿಲು ಚರಂಡಿ ಬಳಿ ಪೋಸ್ಟರ್ ಅಳವಡಿಸಿ ಪ್ರತಿಭಟನೆಯನ್ನು ಸಾರ್ವಜನಿಕರು ಕೈಗೊಂಡಿದ್ದಾರೆ.ಈ ಸಂಬಂಧ ಸಾಮಾಜಿಕ ಜಾಲಾತಾಣಗಳಲ್ಲಿ ಕೂಡ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

You cannot copy content of this page