ಮರವಂತೆಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ,ಮಕ್ಕಳ ಹಬ್ಬ ಕಾರ್ಯಕ್ರಮ
ಕುಂದಾಪುರ:ಮಕ್ಕಳು ತಮ್ಮ ಪೋಷಕರೊಡನೆರೊಡನೆ ಹಂಚಿಕೊಳ್ಳಲು ಸಾಧ್ಯವಾಗದ ಸಮಸ್ಯೆಗಳನ್ನು ಮಕ್ಕಳ ಗ್ರಾಮ ಸಭೆಯಲ್ಲಿ ಹಂಚಿಕೊಂಡಿದ್ದಾರೆ.ಸಾಮಾಜಿಕ ಕಳಕಳಿಯಿಂದ ಮಕ್ಕಳು ವ್ಯಕ್ತಪಡಿಸಿದ ಸಮಸ್ಯೆಗಳನ್ನು,ಅವರ ಬೇಡಿಕೆಗಳನ್ನು ನೂರಕ್ಕೆ ನೂರಷ್ಟು ಈಡೇರಿಕೆ ಮಾಡಲು ಪ್ರಯತ್ನಿಸಲಾಗುವುದು. ಮಗುವಿನ ಗ್ರಹಿಕೆಯನ್ನು ಅವರೊಳಗೆ ಅಡಗಿರುವ ಸಮಸ್ಯೆಗಳನ್ನು ಅಧ್ಯಾಯನ ಮಾಡಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಪ್ರಯೋಜನಕಾರಿ ಆಗುತ್ತದೆ ಎಂದು ಬೈಂದೂರು ಕಾರ್ಯನಿರ್ವಹಣಾಧಿಕಾರಿ ಭಾರತಿ ಹೇಳಿದರು. ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಬೈಂದೂರು,ಗ್ರಾಮ ಪಂಚಾಯತ್ ಮರವಂತೆ ಅವರ ಸಂಯುಕ್ತ ಆಶ್ರಯದಲ್ಲಿ ಮರವಂತೆ ಕಡಲ ತೀರದಲ್ಲಿ ಮಂಗಳವಾರ ನಡೆದ ಮಕ್ಕಳ ವಿಶೇಷ […]



























































































































































































































































































































































































































































































































































































































































































































































































































































































































































































































































































































































































































































































































































































































































































