ಆಲೂರು:ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆ

ಕುಂದಾಪುರ:ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ಭಾರತೀಯ ಚುನಾವಣಾ ಆಯೋಗದ ವತಿಯಿಂದ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಬೈಂದೂರು ವಲಯದ ಆಲೂರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಗ್ರೀಷ್ಮಾ ಮತ್ತು ಪ್ರಜ್ಞಾ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಶಿಕ್ಷಕ ಉದಯ ಕುಮಾರ್ ಶೆಟ್ಟಿ ತರಬೇತಿ ನೀಡಿದ್ದರು.ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯದ ಮುವತ್ತೇರಡು ಶೈಕ್ಷಣಿಕ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ಹೊಸಾಡು:ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಕೆ

ಕುಂದಾಪುರ:ತಾಲೂಕಿನ ಬೈಂದೂರು ವಿಧಾನ ಸಭಾ ಕ್ಷೇತ್ರದ ಹೊಸಾಡು ಗ್ರಾಮದ ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಕೆ ಮಾಡಿದ್ದಾರೆ.ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟೆಮಕ್ಕಿ ಕ್ರಾಸ್ ನಿಂದ ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ಸುಮಾರು 1 ಕಿ.ಮೀ ವರೆಗಿನ ಮಣ್ಣಿನ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಕಳೆದ 6 ವರ್ಷಗಳಿಂದ ಕಾಲೋನಿ ನಿವಾಸಿಗಳು ನೀಡಿರುವ ಹಲವು ಮನವಿಗಳಿಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಪಂದನೆ ಮಾಡದೆ ಇದ್ದಿದ್ದರಿಂದ […]

ಅರಾಟೆ:ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ:ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಅರಾಟೆ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ದೀಕ್ಷಾ ಯೂತ್ ಕ್ಲಬ್ ಮತ್ತು ರಿಂಗ್ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಸೋಮವಾರ ನಡೆಯಿತು.ಡಾ.ಉಮೇಶ್ ಪುತ್ರನ್,ಹೊಸಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ,ಮಂಜುನಾಥ ಅರಾಟೆ,ಎಂ.ಎಂ ಸುವರ್ಣ,ಅನಿಲ್ ಮೆಂಡನ್,ವಿಜಯ್ ಪುತ್ರನ್,ಸುಮಾ,ಮಾಲತಿ ಆಚಾರ್ಯ,ಅರುಣ್ ಆಚಾರ್ಯ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸ್ಥಳೀಯ ವಿದ್ಯಾರ್ಥಿಗಳಾದ ಆರಾಧ್ಯ.ಆರ್ ಮತ್ತು ಲಕ್ಷ ರಾಜೇಶ್ ಅವರನ್ನು ಸನ್ಮಾನಿಸಲಾಯಿತು.

You cannot copy content of this page