ಕಾರ್ ಡಿಕ್ಕಿ:ಬೈಕ್ ಸವಾರ ಸಾವು

ಕುಂದಾಪುರ:ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಡಿವೈಡರ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಜಯದುರ್ಗಾ ಬಸ್ ಡ್ರೈವರ್ ಮಹಾಬಲ ಅವರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.ಬಸ್ ಡ್ರೈವರ್ ಕೆಲಸವನ್ನು ನಿರ್ವಹಿಸಿ ಮಹಾಬಲ ಅವರು ಬೈಕ್‍ನಲ್ಲಿ ಹೆಮ್ಮಾಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆಮ್ಮಾಡಿ ಹಾಲು ಡೈರಿ ಡಿವೈಡರ್ ಬಳಿ ತೋಪ್ಲು ಸಂಪರ್ಕ ರಸ್ತೆಗೆ ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಮುಳ್ಳಿಕಟ್ಟೆ ಕಡೆಯಿಂದ ಕುಂದಾಪುರಕ್ಕೆ ಕಡೆಗೆ ವೇಗವಾಗಿ ಸಾಗುತ್ತಿದ್ದ ಡಸ್ಟರ್ ಕಾರು ಡಿಕ್ಕಿ ಹೊಡೆತ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬಗೆ ಸನ್ಮಾನ

ಹೆಮ್ಮಾಡಿ:ಕಿತ್ತಳೆ ಹಣ್ಣನ್ನು ಮಾರಿ ಸರಕಾರಿ ಶಾಲೆಯನ್ನು ಕಟ್ಟಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಅವರನ್ನು ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನಡೆದ ಜನತಾ ಆವಿಷ್ಕಾರ್ 2K23 ಉದ್ಘಾಟನಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಕಾಲೇಜಿನ ಅಧ್ಯಕ್ಷರಾದ ಪ್ರಿನ್ಸಿಪಾಲ್ ಗಣೇಶ ಮೊಗವೀರ,ಮಾಧವ ಪೂಜಾರಿ,ಚಿತ್ರಾ ಕಾರಂತ,ಹರ್ಷವರ್ಧನ ಶೆಟ್ಟಿ,ತಿಮ್ಮಪ್ಪ ಮೊಗವೀರ,ಉದಯ ಕುಮಾರ್ ಹಟ್ಟಿಯಂಗಡಿ, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ ಪೂಜಾರಿ ಉಪಸ್ಥಿತರಿದ್ದರು.

ಬಿ.ವೈ.ವಿಜಯೇಂದ್ರ ರಾಜ್ಯ ಬಿಜೆಪಿ ನೂತನ ಸಾರಥಿ ಆಗಿ ನೇಮಕ

ಬೆಂಗಳೂರು:ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ , ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಶಿಕಾರಿಪುರ ಶಾಸಕರಾದ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕೊನೆ ಗೊಂಡು ಆರು ತಿಂಗಳ ಬಳಿಕ ಹಲವು ಲೆಕ್ಕಾಚಾರ […]

You cannot copy content of this page