ಗಂಗೊಳ್ಳಿ:ಪ್ರಾರ್ಥನಾ ಪೈಗೆ ಪ್ರಥಮ ಸ್ಥಾನ

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಜೈನ್ ಕ್ರೀಡಾ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಪ್ರಥಮ ಸ್ಥಾನಗಳಿಸಿದ್ದಾರೆ.ಪತ್ರಕರ್ತ ಬಿ.ರಾಘವೇಂದ್ರ ಪೈ ಗಂಗೊಳ್ಳಿ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ.

ಗೂಡ್ಸ್ ರೈಲಿಗೆ ಬೆಂಕಿ,ತಪ್ಪಿದ ಬಾರಿ ದೊಡ್ಡ ಅನಾಹುತ

ಕುಂದಾಪುರ:ತಿಂಡಿ ತಿನಿಸುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲಿಗೆ ಬೆಂಕಿ ತಗುಲಿದ ಪರಿಣಾಮ ವಸ್ತುಗಳು ಸುಟ್ಟು ಹೋದ ಘಟನೆ ಬಿಜೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.ಅ.9 ರಂದು ಮುಂಬೈ ಕೋಲಾಡ್ ನಿಂದ ಮಂಗಳೂರು ಸುರತ್ಕಲ್ ಕಡೆಗೆ ಲಾರಿಗಳನ್ನು ಹೊತ್ತು ಸಾಗುತ್ತಿದ್ದ ಗೂಡ್ಸ್ ರೈಲಿನಲ್ಲಿ,ಬೈಂದೂರು ತಾಲೂಕಿನ ಬಿಜೂರು ರೈಲ್ವೆ ನಿಲ್ದಾಣದ ಸಮೀಪ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಲಾರಿಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ಇರುವುದನ್ನು ನೋಡಿದ ಸಿಬಂದಿ ತಕ್ಷಣ ಗೂಡ್ಸ್ ರೈಲು ನಿಲ್ಲಿಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದರು.ಬೈಂದೂರು ಅಗ್ನಿ ಶಾಮಕ ದಳದವರು ಸ್ಥಳಕ್ಕೆ […]

ಅ.8 ರಿಂದ ಕೊಡಪಾಡಿ ಶ್ರೀ ಗುಹೇಶ್ವರ ದೇವಳದಲ್ಲಿ ಅಷ್ಟಮಂಗಳ ಪ್ರಶ್ನೆ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವಾಲಯದ ಜೀರ್ಣೊದ್ಧಾರ ಪ್ರಯುಕ್ತ ಹಮ್ಮಿಕೊಂಡಿದ್ದ ಅಷ್ಟಮಂಗಳ ಪ್ರಶ್ನೆ ಚಿಂತನಾ ಕಾರ್ಯಕ್ರಮ ಅ.7,8,9 ರಂದು ನಡೆಯುವುದೆಂದು ನಿಶ್ಚಯಿಸಲಾಗಿತ್ತು.ಅನಿವಾರ್ಯ ಕಾರಣದಿಂದ ಅಷ್ಟಮಂಗಳ ಪ್ರಶ್ನೆ ಕಾರ್ಯಕ್ರಮ ಅ.8,9 ಮತ್ತು 10 ರಂದು ಕೇರಳದ ಪ್ರಸಿದ್ಧ ದೈವಜ್ಞರಾದ ನಾರಾಯಣ ನಂಬೂದಿರಿ ಕೈಮುಕ್ಕು ಹಾಗೂ ಇತರ ದೈವಜ್ಞರ ಸಹಕಾರದಲ್ಲಿ ನಡೆಯಲಿದೆ ದೇವಾಲಯದ ಸಮಿತಿ ತಿಳಿಸಿದೆ.

You cannot copy content of this page