ಮರವಂತೆ:ಸ್ಚಚ್ಛಾ ಭಾರತ ಅಭಿಯಾನ ವಿಶ್ವವ್ಯಾಪಿಯಾಗಿ ಪಸರಿಸಿದೆ

ಕುಂದಾಪುರ:ಪ್ರಧಾನ ಮಂತ್ರಿಗಳ ಮಹಾತ್ವಾಕಾಂಕ್ಷಿ ಯೋಜನೆ ಸ್ಚಚ್ಛಾ ಭಾರತ ಅಭಿಯಾನ ಇಂದು ವಿಶ್ವವ್ಯಾಪಿಯಾಗಿ ಪಸರಿಸಿದೆ ಸ್ವಚ್ಛತೆ ಎನ್ನುವುದು ಕಾನೂನಿ ನಿಂದ ಬರುವಂತಹದ್ದು ಅಲ್ಲಾ ಅರಿವು ನಿಂದ ಆಗುವಂತದ್ದು ತ್ಯಾಜ್ಯ ಮುಕ್ತ ಪರಿಸರವನ್ನು ನಿರ್ಮಾಣ ಮಾಡಲು ಎಲ್ಲರೂ ಪಣ ತೊಡಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಉಡುಪಿ ಜಿಲ್ಲಾ ಪಂಚಾಯತ್,ಕುಂದಾಪುರ ಮತ್ತು ಬೈಂದೂರು ತಾಲೂಕು ಪಂಚಾಯತ್ ಹಾಗೂ ಹೊಸಾಡು,ತ್ರಾಸಿ,ಗುಜ್ಜಾಡಿ,ಮರವಂತೆ ಪಂಚಾಯತ್ ಸಹಭಾಗಿತ್ವದಲ್ಲಿ ಭಾನುವಾರ ತ್ರಾಸಿ-ಮರವಂತೆ ಬೀಚ್‍ನಲ್ಲಿ ನಡೆದ ಸ್ವಚ್ಛತಾ ಹೀ ಸೇವಾ,ಸ್ವಚ್ಛತೇಯೆ ಸೇವೆ ಎಂಬ ವಿಶೇಷ ಆಂದೋಲನದ […]

ಕಟ್ ಬೇಲ್ತೂರು:ಪಂಚಭೂತಗಳಲ್ಲಿ ದಂಪತಿ ಲೀನಾ,ಅನಾಥ ಮಕ್ಕಳಿಗೆ ಸರಕಾರಿ ಉದ್ಯೋಗ ನೀಡಲು ಆಗ್ರಹ

ಮನೆಯಲ್ಲಿ ನಿರವ ಮೌನ ಕುಂದಾಪುರ:ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ ಕುಂದಾಪುರ ತಾಲೂಕಿನ ಕಟ್‍ಬೇಲ್ತೂರು ಗ್ರಾಮದ ಸುಳ್ಸೆ ನಿವಾಸಿಗಳಾದ ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಅವರ ಮೃತದೇಹದ ಶವ ಸಂಸ್ಕಾರದ ಕಾರ್ಯ ಸ್ವಗ್ರಾಮವಾದ ಸುಳ್ಸೆಯಲ್ಲಿ ಶನಿವಾರ ನಡೆಯಿತು.ಸಪ್ತಪತಿ ತುಳಿದು ಹಸೆಮಣೆ ಏರಿದ್ದ ಆದರ್ಶ ದಂಪತಿಗಳು ಸಾವಿನಲ್ಲೂ ಒಂದಾಗುವುದರ ಮುಖೇನ ಇಹಲೋಕವನ್ನು ತ್ಯಜಿಸಿದ್ದಾರೆ.ಅವರು ಒಂದು ಗಂಡು ಮತ್ತು ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.ಸೌಮ್ಯ ಸ್ವಭಾವವನ್ನು ಹೊಂದಿದ್ದ […]

ಗಂಗೊಳ್ಳಿ:ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಆಚರಣೆ

ಗಂಗೊಳ್ಳಿ:ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮದಿಂದ ಗುರುವಾರ ಆಚರಣೆ ಮಾಡಿದರು.ಗಂಗೊಳ್ಳಿ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಸೀದಿ ಯಿಂದ ಗಂಗೊಳ್ಳಿ ಲಾಸ್ಟ್ ಬಸ್‍ಸ್ಟ್ಯಾಂಡ್ ತನಕ ಪಾದಯಾತ್ರೆ ನಡೆಯಿತು.ಈ ಸಂದರ್ಭ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

You cannot copy content of this page