ಸೌಪರ್ಣಿಕಾ ನದಿಯಲ್ಲಿ ಅಕ್ರಮ ಮರಳುಗಾರಿಕೆ:ಆರೋಪಿಗಳು ವಶಕ್ಕೆ

ಕುಂದಾಪುರ:ಯಾವುದೇ ರೀತಿ ಪರವಾನಗಿ ಪಡೆಯದೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊವಾಡಿ ಗಂಡ್‍ಬೇರು ಸೌಪರ್ಣಿಕಾ ನದಿಯಲ್ಲಿ ತಡರಾತ್ರಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳಾದ ಆಲ್ಟನ್ ಆನಗೋಡು(42),ಉತ್ತರ ಪ್ರದೇಶ ರಾಜ್ಯದ ನಿವಾಸಿಗಳಾದ ಮೈನೇಜರ್ (30) ಮತ್ತು ದಿನೇಶ (22)ಜಿತೇಂದ್ರ ಕುಮಾರ್ (25),ಗುದ್ದು ಕುಮಾರ (20) ಎನ್ನುವ ವ್ಯಕ್ತಿಗಳನ್ನು ಗಂಗೊಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ರಾತ್ರಿ ಸಮಯದಲ್ಲಿ ಸೌಪರ್ಣಿಕಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎನ್ನುವ ಕ್ಲಪ್ತ ಮಾಹಿತಿ ಮೇರೆಗೆ ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಹರೀಶ್ ಆರ್ […]

ಮೃತಪಟ್ಟ ಸ್ಥಿತಿಯಲ್ಲಿಅಪರೂಪದ ಜಾತಿಗೆ ಸೇರಿದ ಕಡಲಾಮೆ ಪತ್ತೆ

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲೈಟ್‌ಹೌಸ್ ಮಡಿ ಪರಿಸರದಲ್ಲಿ ಕಡಲ ಅಲೆಗೆ ಸಿಲುಕಿ ಮೃತಪಟ್ಟು ತೆರೆಗಳ ನಡುವೆ ತೆಲುತ್ತಿದ್ದ ಅಪರೂಪದ ಜಾತಿಗೆ ಸೇರಿದ ಕಡಲಾಮೆ ಶುಕ್ರವಾರ ಪತ್ತೆಯಾಗಿದೆ.ಮೀನುಗಾರ ನಾಗರಾಜ್ ಖಾರ್ವಿ ಸಮುದ್ರಕ್ಕೆ ಮೀನುಗಾರಿಕೆ ತೆರಳಿದ ಸಂದರ್ಭ ಅಲೆಗಳ ಮಧ್ಯೆ ಕಡಲಾಮೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದೆ.ಮೃತ ಕಡಲಾಮೆಯನ್ನು ಅವರು ತಮ್ಮ ಮರ್ಗಿ ಪಾತಿ ದೋಣಿಯಲ್ಲಿ ದಡಕ್ಕೆ ತಂದಿದ್ದರು.ಅತಿಯಾದ ವಾಸನೆಯಿಂದ ಕೂಡಿದ ಕಡಲಾಮೆಯನ್ನು ಬಳಿಕ ಸ್ಥಳೀಯರ ಸಹಕಾರದಿಂದ ಮಣ್ಣಿನಲ್ಲಿ ಹೂಳಲಾಯಿತು.ಕಡಲಾಮೆ ಸಮುದ್ರದಲ್ಲಿ ಮತ್ಸö್ಯ ಸಂಪತ್ತನ್ನು ಸಂರಕ್ಷಣೆ ಮಾಡುವುದಲ್ಲದೆ ಮೀನುಗಳು […]

ರಾಷ್ಟ್ರೀಯ ಆದರ್ಶ ಶಿಕ್ಷಕ ಪ್ರಶಸ್ತಿಗೆ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಉದಯ ನಾಯ್ಕ್ ಆಯ್ಕೆ

ಕುಂದಾಪುರ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ,ಕನಕ ಅಧ್ಯಯನ ಪೀಠ,ಚೇತನಾ ಫೌಂಡೇಶನ್ ಹುಬ್ಬಳ್ಳಿ ಅವರ ಸಂಯುಕ್ತ ಆಶ್ರಯದಲ್ಲಿ ಕೊಡಮಾಡುವ ಡಾ| ಎಸ್, ರಾಧಾಕೃಷ್ಣನ್ ರಾಷ್ಟ್ರೀಯ ಆದರ್ಶ ಶಿಕ್ಷಕ ಪ್ರಶಸ್ತಿಗೆ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಉದಯ ನಾಯ್ಕ್ ರವರು ಆಯ್ಕೆಯಾಗಿದ್ದಾರೆ.ಶೈಕ್ಷಣಿಕ,ಸಾಹಿತ್ಯ,ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಸಾಧನೆಯನ್ನು ಪರಿಗಣಿಸಿ ಉಪನ್ಯಾಸಕ ಉದಯ್ ನಾಯ್ಕ್ ಅವರಿಗೆ ಈ ಪ್ರಶಸ್ತಿ ದೊರೆತಿದೆ.ಉಪನ್ಯಾಸಕ ಉದಯ್ ನಾಯ್ಕ್ ಅವರಿಗೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದ ಶುಭಾಶಯವನ್ನು ಕೋರಿದ್ದಾರೆ.

You cannot copy content of this page