ವಾರ್ಷಿಕ ಮಹಾಸಭೆ,ಆರೋಗ್ಯ ನಿಧಿ ವಿತರಣೆ

ಕುಂದಾಪುರ:ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಪ್ರತಿಷ್ಠಿತ ಕ್ಲಬ್‍ಗಳಲ್ಲಿ ಒಂದಾದ ಕುಂದಾಪುರ ತಾಲೂಕು ಎಡ್ವರ್ಡ್ ಮೆಮೋರಿಯಲ್ ಕ್ಲಬ್‍ನ ಹಾಗೂ ರೀಡಿಂಗ್ ರೂಮ್ ಸೊಸೈಟಿ ಕುಂದಾಪುರ ಅದರ 95ನೇ ವಾರ್ಷಿಕ ಮಹಾಸಭೆಯಲ್ಲಿ ಬಡ ಕುಟುಂಬದ ಸದಸ್ಯರ ಅನಾರೋಗ್ಯ ಪೀಡಿತರಿಗೆ ಆರೋಗ್ಯ ನಿಧಿ ಯೋಜನೆಯಡಿ ಧನಸಾಹಯವನ್ನು ಕ್ಲಬ್ಬಿನ ಅಧ್ಯಕ್ಷ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರು ವಿತರಿಸಿದರು.ಕ್ಲಬ್ಬಿನ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಕ್ಲಬ್ಬಿನ ಕಾರ್ಯದರ್ಶಿ ಕಾಳಾವರ ಉದಯ ಶೆಟ್ಟಿ ಲೆಕ್ಕಪತ್ರ ಮಂಡನೆ ಮಾಡಿದರು.ನಿವೃತ್ತ ಮುಖ್ಯೋಪಾಧ್ಯಾಯರಾದ ವೀರಣ್ಣ ಶೆಟ್ಟಿ ನಿರೂಪಿಸಿದರು.ಎಡ್ವರ್ಡ್ ಮೆಮೋರಿಯಲ್ […]

ತರಕಾರಿ ಅಂಗಡಿಗೆ ನುಗ್ಗಿದ ಕಾರು,ತಪ್ಪಿದ ಬಾರಿ ಅನಾಹುತ

ಉಡುಪಿ:ಮಧ್ಯಪಾನ ಮಾಡಿಕೊಂಡು ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದ ಯುವಕ ತರಕಾರಿ ಅಂಗಡಿಗೆ ಕಾರನ್ನು ನುಗ್ಗಿಸಿದ ಘಟನೆ ಬೈಲೂರುನಲ್ಲಿ ನಡೆದಿದೆ.ಬೆಂಗಳೂರಿನಿಂದ ಮಲ್ಪೆ ಕಡೆಗೆ ಸಾಗುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ನಾಲ್ಕು ಜನರ ಪ್ರಯಾಣ ಮಾಡುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾರು ಡಿಕ್ಕಿ ಹೊಡೆದ ರಭಸಕ್ಕೆ ಅಂಗಡಿಯ ಗೋಡೆ ಬಿದ್ದಿದೆ. ಈ ಹೊತ್ತಿನಲ್ಲಿ ಅಂಗಡಿಯಲ್ಲಿ ಯಾರು ಇಲ್ಲದೆ ಇರುವುದರಿಂದ ಬಾರಿ ದೊಡ್ಡ ದುರಂತ‌ ತಪ್ಪಿದೆ.

ಬಿಜೆಪಿಗೆ ಒಲಿದ ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ

ಕುಂದಾಪುರ:ತ್ರಾಸಿ ಗ್ರಾಮ ಪಂಚಾಯತ್‍ನಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಪಂಚಾಯತ್ ಸದಸ್ಯ ಮಿಥುನ್ ದೇವಾಡಿಗ ತ್ರಾಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯೆ ಹೇಮಾ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.06 ಜನ ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ 02 ಜನ ಬಿಜೆಪಿ ಪಕ್ಷದ ಸದಸ್ಯರು ಸೇರಿ ಒಟ್ಟು ತ್ರಾಸಿ ಗ್ರಾಮ ಪಂಚಾಯತ್‍ನಲ್ಲಿ 08 ಪಂಚಾಯತ್ ಸದಸ್ಯರಿದ್ದಾರೆ.ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜು ಮೆಂಡನ್ ಹಾಗೂ ಬಿಜೆಪಿ ಪಕ್ಷದ […]

You cannot copy content of this page