ಐಎಂಜೆ ಐ ಎಸ್ ಸಿ ಕಾಲೇಜು ಮೂಡ್ಲಕಟ್ಟೆ – ಶಿಕ್ಷಕ-ರಕ್ಷಕ ಸಭೆ

ಕುಂದಾಪುರ:ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕುಂದಾಪುರ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಿನ್ಸಿಪಾಲ್ ಡಾ. ಪ್ರತಿಭಾ ಎಂ ಪಟೇಲ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಶೈಕ್ಷಣಿಕ ವರ್ಷದ ಎಲ್ಲಾ ತತ್ವ ವಿಚಾರತೆಯನ್ನು ಪೋಷಕರೊಂದಿಗೆ ಸಂವಾದ ಮಾಡಿದರು.ಬಹುತೇಕ ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಮಕ್ಕಳ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರೊಂದಿಗೆ, ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪ್ರಶಂಶಿಸಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಪ್ರೊ. ಜಯಶೀಲ್ ಕುಮಾರ್,ಬಿಸಿಎ ವಿಭಾಗದ ಮುಖ್ಯಸ್ಥರಾದ ಪ್ರೊ. ಅಹಮದ್ ಖಲೀಲ್ […]

ಆಲೂರು ನರ್ಲೆಗುಳಿ ಬಾಲಕೃಷ್ಣ ಶೆಟ್ಟಿ ನಿಧನ

ಕುಂದಾಪುರ:ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಆಲೂರು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾದ ಆಲೂರು ನರ್ಲೆಗುಳಿ ಬಾಲಕೃಷ್ಣ ಶೆಟ್ಟಿ (71) ಅವರು ಅನಾರೋಗ್ಯದ ಕಾರಣದಿಂದ ಸೋಮವಾರ ನಿಧನರಾದರು.ಮೂವರು ಸಹೋದರಿಯರು,ಇಬ್ಬರು ಸಹೋದರರು ಹಾಗೂ ಪತ್ನಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

ಕೋಡಿ ಕನ್ಯಾಣ,ಹಂಗಾರಕಟ್ಟೆ ಬಂದರಿಗೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಭೇಟಿ: ಮೀನುಗಾರರ ಸಮಸ್ಯೆಗಳಿಗೆ ಸ್ಪಂದನೆ

ಕುಂದಾಪುರ:ಮೀನುಗಾರರ ಸಮಸ್ಯೆಗಳು ಹಂತ- ಹಂತಗಳಲ್ಲಿ ಬಗೆಹರಿಸುವ ಇಚ್ಛಾಶಕ್ತಿ ನಮ್ಮ ಸರಕಾರಕ್ಕಿದೆ ಎಂದು ಬಂದರು,ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಹೇಳಿದರು.ಭಾನುವಾರ ಕೋಡಿಕನ್ಯಾಣ ಮೀನುಗಾರಿಕೆ ಬಂದರು ಪ್ರದೇಶದಕ್ಕೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಕಡಲ್ಕೊರೆತ ಸಮಸ್ಯೆ ಕಾಸರಗೋಡಿನಿಂದ ಕಾರವಾರ- ಗೋವಾದ ತನಕ ಹಬ್ಬಿದೆ. ಇದಕ್ಕೆ ತಾತ್ಕಾಲಿಕ ಪರಿಹಾರ ಸಮಂಜಸವಲ್ಲ.ಹೀಗಾಗಿ ತಜ್ಞರ ಸಮಿತಿಯನ್ನು ನೇಮಿಸಿದ್ದು ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಲಾಗುತ್ತಿದೆ,ತಾತ್ಕಾಲಿಕ ಪರಿಹಾರ ಬೇಕಾದಲ್ಲಿ ವಿಮರ್ಶೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು.ಕೋಡಿ ಕನ್ಯಾಣ,ಹಂಗಾರಕಟ್ಟೆ, ಬೆಂಗ್ರೆ ಮೀನುಗಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇವರ ದುಃಸ್ಥಿತಿ […]

You cannot copy content of this page