ಸ್ವಾತಿ ಸ್ವಸಹಾಯ ಸಂಘಕ್ಕೆ ಸನ್ಮಾನ

ಕುಂದಾಪುರ:25 ವರ್ಷಗಳನ್ನು ಪೂರೈಸಿರುವ,3 ಕೋಟಿಗೂ ಅಧಿಕ ವ್ಯವಹಾರವನ್ನು ನಡೆಸಿಕೊಂಡು ಬಂದಿರುವ ನವೋದಯ ಸ್ವಾತಿ ಸ್ವಸಹಾಯ ಸಂಘ ಮರವಂತೆ ಅದರ ಸದಸ್ಯರನ್ನು ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಾ.ಎಂ ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಂಘದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಎಸ್ ಪೂಜಾರಿ,ಶಾಸಕ ಗುರುರಾಜ್ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾ ಪೋಷಕ್ ಮನೆ ಹಸ್ತಾಂತರ

ಕುಂದಾಪುರ:ಯಕ್ಷಗಾನ ಕಲಾರಂಗ ಉಡುಪಿ,ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್,ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟರ್,ಯಕ್ಷನಿಧಿ,ವಿದ್ಯಾ ಪೋಷಕ್ ಮನೆ ಹಸ್ತಾಂತರ ,ಯಕ್ಷಶಿಕ್ಷಣ ಹಾಗೂ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಪ್ರಾಯೋಜಕತ್ವದಲ್ಲಿ ದಾನಿಗಳ ನೆರವಿನಿಂದ ಹೆಮ್ಮಾಡಿ ಗ್ರಾಮದ ಕಟ್ಟು ಎಂಬಲ್ಲಿ ನಿರ್ಮಿಸಿದ ನೂತನೆ ಮನೆ ಸರಸ್ವತಿ ನಿಲಯ ಅದರ ಹಸ್ತಾಂತ ಕಾರ್ಯಕ್ರಮ ಗುರುವಾರ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಜ್ಯೋತಿ ಬೆಳಗಿಸುವುದರ ಮುಖೇನ ನೂತನ ಮನೆಯನ್ನು ಉದ್ಘಾಟಿಸಿ ಮಾತನಾಡಿ,ಅತ್ಯಂತ ಬಡತನದಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ವಾಸಕ್ಕೆ ಯೋಗ್ಯವಾದ […]

ಶಿರೂರು:ಪ್ರೌಢಶಾಲೆ ವಿದ್ಯಾರ್ಥಿ ಆತ್ಮಹತ್ಯೆ

ಬೈಂದೂರು:ವರ್ಗಾವಣೆ ಪ್ರಮಾಣಪತ್ರ (ಟಿಸಿ) ನೀಡಲು ವಿಳಂಬ ಮಾಡಿದರು ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ನಡೆದಿದೆ.ನಿತಿನ್ ಆಚಾರ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಈತ ಬೈಂದೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಾಗಿದ್ದು ಪ್ರಸ್ತುತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ. ಸೋಮವಾರ ಸಂಸ್ಥೆಗೆ ವರ್ಗಾವಣೆ ಪತ್ರ ಪಡೆಯಲು ಹೋದ ವೇಳೆ ಅಲ್ಲಿ ಶಿಕ್ಷಕರು ಬೈದಿದ್ದಾರೆ ಎಂಬ ಕಾರಣಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೆತ್ತವರು ದೂರು ನೀಡಿದ್ದಾರೆ. […]

You cannot copy content of this page