ಕೂಡ್ಗಿಹಿತ್ಲು ಯಕ್ಷೋತ್ಸವ ಕಾರ್ಯಕ್ರಮ,ಸಾಧಕ ಕಲಾವಿದರಿಗೆ ಸನ್ಮಾನ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣ್ಕಿ ಕೂಡ್ಲಿಹಿತ್ಲು ಎಂಬಲ್ಲಿ ಯಕ್ಷಪ್ರೇಮಿ ರಶ್ಮಿತಾ ಸಂಜಯ್ ಮೊವಾಡಿ ಅವರ ಪ್ರಾಯೋಜಕತ್ವದಲ್ಲಿ ಕೂಡ್ಗಿಹಿತ್ಲು ಯಕ್ಷೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಗುರುವಾರ ನಡೆಯಿತು.ಸಿಗಂದೂರು ಮೇಳದವರಿಂದ ಮತದಾನ ಜಾಗೃತಿ ಕುರಿತು ವಿಶೇಷ ನಾಟ್ಯ ಪ್ರದರ್ಶನವನ್ನು ಮಾಡಲಾಯಿತು.ಬಡಗುತಿಟ್ಟಿನ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಅವರ ನಿಧನಕ್ಕೆ ಸಂತಾಪವನ್ನು ಸೂಚಿಸಲಾಯಿತು.ಕೂಡ್ಗಿಹಿತ್ಲು ಯಕ್ಷೋತ್ಸವ ಕಾರ್ಯಕ್ರಮದ ಆಯೋಜಕರಾದ ರಶ್ಮಿತಾ ಸಂಜಯ್ ಮೊವಾಡಿ ಅವರು ಸಾಧಕ ಯಕ್ಷಗಾನ ಕಲಾವಿದರನ್ನು ಸನ್ಮಾನಿಸಿ ಮಾತನಾಡಿ,ಕೂಡ್ಗಿಹಿತ್ಲು ಯಕ್ಷೋತ್ಸವ ಕಾರ್ಯಕ್ರಮ ಎನ್ನುವುದು ಬಹಳ ದಿನಗಳ ಕಾಲದ […]

ನಾವುಂದ:ಸಪರಿವಾರ ಶ್ರೀ ಪಾದ್ಮಾವತಿ ಅಮ್ಮನವರ ವರ್ಧಂತ್ಯೋತ್ಸವ,ಶ್ರೀರಾಮ ದೇವರ ಪ್ರತಿಷ್ಠೆ

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸಪರಿವಾರ ಶ್ರೀ ಪಾದ್ಮಾವತಿ ಅಮ್ಮನವರ ದೇವಸ್ಥಾನದ ಷುಷ್ಠಿ ಮಹೋತ್ಸವ ಹಾಗೂ ಶ್ರೀರಾಮ ನೂತನ ಭಜನಾ ಮಂದಿರ ಲೋಕಾರ್ಪಣೆ ಮತ್ತು ಶ್ರೀರಾಮ ದೇವರ ಬಿಂಬ ಪ್ರತಿಷ್ಠೆ,ಶ್ರೀ ಬೊಬ್ಬರ್ಯ ದೇವರಿಗೆ ಬೆಳ್ಳಿ ಮುಖವಾಡ ಸಮರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಬುಧವಾರ ನಡೆಯಿತು.ಕ್ಷೇತ್ರದ ಪ್ರಧಾನ ಅರ್ಚಕರಾದ ವೇದ ಮೂರ್ತಿ ಪರಮೇಶ್ವರ ಅಡಿಗರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಮಹಾ ಅನ್ನಪ್ರಸಾದವನ್ನು ಸ್ವೀಕರಿಸಿದರು.ಯಕ್ಷಗಾನ ಕಾರ್ಯಕ್ರಮ ನಡೆಯಿತು.ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ […]

ಶ್ರೀಕ್ಷೇತ್ರ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ಬ್ರಹ್ಮರಥೋತ್ಸವ ಸಂಪನ್ನ

ಕುಂದಾಪುರ:ತಾಲೂಕಿನ ಶ್ರೀಕ್ಷೇತ್ರ ಬಗ್ವಾಡಿ ಶ್ರೀಮಹಿಷಾಸುರ ಮರ್ದಿನಿ ದೇವಿ ಬ್ರಹ್ಮರಥೋತ್ಸವ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.ಶ್ರೀಮಹಿಷಾಸುರ ಮರ್ದಿನಿ ದೇವಿ ವಾರ್ಷಿಕ ಬ್ರಹ್ಮರಥೋತ್ಸವ ಅಂಗವಾಗಿ ಮಹಿಳೆರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ ಜರುಗಿತು.ಶ್ರೀದೇವಿಗೆ ಅಲಂಕಾರ ಪೂಜೆ,ಮಹಾ ಮಂಗಳಾರತಿ ಸೇವೆ,ಮಹಾ ಅನ್ನಸಂತರ್ಪಣೆ ನಡೆಯಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿ ಶ್ರೀದೇವಿ ಅನ್ನಪ್ರಸಾದ ಸ್ವೀಕರಿಸಿದರು.15 ನೇ ವರ್ಷದ ಶ್ರೀದೇವಿ ಪುರ ಮೆರವಣಿಗೆ ಗಣಪತಿ ಕಟ್ಟೆಯಿಂದ ಬಗ್ವಾಡಿ ನಡು ಹಿತ್ಲುವಿನಲ್ಲಿರುವ ಗ್ರಾಮದ ಕಟ್ಟೆಯವರೆಗೆ ನೆರವೇರಿತು.ಭಕ್ತರು ಭಕ್ತಿ ಭಾವದಿಂದ ಬ್ರಹ್ಮ ರಥವನ್ನು ಎಳೆದರು.ಚಂಡೆ ವಾದನ,ವಾದ್ಯ […]

You cannot copy content of this page