ತಾಲೂಕು ಮಟ್ಟದ ಸಾಹಿತ್ಯಕ ಸ್ಪರ್ಧೆಗಳಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ

Share

ಕುಂದಾಪುರ:ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ ಸಾಹಿತ್ಯಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ವಿಭಾಗಗಳಲ್ಲಿ ಸಾಧನೆ ಮೆರೆದಿದ್ದಾರೆ.
ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಪ್ರಥಮ ಸ್ಥಾನ,ರಸಪ್ರಶ್ನೆ(ಕ್ವಿಜ್) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ಗಿರೀಶ್ ಪೈ ಪ್ರಥಮ ಸ್ಥಾನ,ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಐಶ್ವರ್ಯ ವೈದ್ಯ ದ್ವಿತೀಯ ಸ್ಥಾನ,ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವೈಷ್ಣವಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ
ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share

Leave a comment

Your email address will not be published. Required fields are marked *

You cannot copy content of this page