ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ಮಹಾಸಭೆ
ಕುಂದಾಪುರ:ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಕೊಡಪಾಡಿ-ಗುಜ್ಜಾಡಿ ಅದರ 7ನೇ ವಾರ್ಷಿಕ ಮಹಾಸಭೆ ತ್ರಾಸಿ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಮಾತನಾಡಿ,ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡುವುದರ ಜತೆಗೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆದು ಕೊಳ್ಳಲು ಸಂಘದ ಸದಸ್ಯರಿಗೆ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಕುರಿತು ಕ್ರೀಯಾ ಯೋಜನೆ ರೂಪಿಸಲಾಗಿದೆ ಎಂದರು.ಸಂಘದ ಉಪಾಧ್ಯಕ್ಷೆ ರತ್ನ ಟಿ ದೇವಾಡಿಗ,ನಿರ್ದೇಶಕರಾದ ವಿಜಯ ಬಿ,ಸುರೇಖಾ ಕಾನೋಜಿ,ಮಹಾಲಕ್ಷಿ,ಶಾಂತಾ,ರೇಖಾ ಖಾರ್ವಿ,ಲಲಿತಾ ಖಾರ್ವಿ,ಶ್ಯಾಮಲಾ ದೇವಿ,ಶಾಂತಿ ಖಾರ್ವಿ,ಸುನೀತಾ ಪೂಜಾರಿ,ಶಾಂತಾ ಮರಾಠಿ ಉಪಸ್ಥಿತರಿದ್ದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಸ್ವಾಮಿಲಿಂಗೇಶ್ವರ ಅವರು 2022-23ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು.ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.ಸಿಬ್ಬಂದಿ ಶ್ರೀಲವಿ ಸ್ವಾಗತಿಸಿದರು.ಸದಸ್ಯೆ ಜಿ ರೇಣುಕಾ ಸೇರುಗಾರ್ ವಂದಿಸಿದರು.