ಆಯುಷ್ ಖಾರ್ವಿಗೆ ದ್ವಿತೀಯ ಸ್ಥಾನ
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಕಾಂಪಿಟೇಶನ್ನಲ್ಲಿ ಭಾಗವಹಿಸಿದ ಸರಕಾರಿ ಕಿರಿಯ ಪ್ರಾಥಮಿಕ ಗಂಗೊಳ್ಳಿ ರಥ ಬೀದಿ ಶಾಲೆ ನಾಲ್ಕನೇ ತರಗತಿ ವಿದ್ಯಾರ್ಥಿ,ಗಂಗೊಳ್ಳಿ ದಾಕುಹಿತ್ಲು ಗಣಪತಿ ಮತ್ತು ಲತಾ ದಂಪತಿ ಪುತ್ರ ಆಯುಷ್ ಜಿ ಖಾರ್ವಿ ದ್ವಿತೀಯ ಸ್ಥಾನ ಪಡೆದಿದ್ದಾರೆ.ಪ್ರಸನ್ನ ಕೆ.ಬಿ ಮತ್ತು ಸುನಿತಾ ಅವರು ತರಬೇತಿ ನೀಡಿದ್ದರು.














































































































































































































































































































































































































































































































































































































































































































































































































































































































































































































































































































































































































































































































































































































































































