ಹೊಸಾಡು:ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಕೆ

Share

ಕುಂದಾಪುರ:ತಾಲೂಕಿನ ಬೈಂದೂರು ವಿಧಾನ ಸಭಾ ಕ್ಷೇತ್ರದ ಹೊಸಾಡು ಗ್ರಾಮದ ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಕೆ ಮಾಡಿದ್ದಾರೆ.
ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟೆಮಕ್ಕಿ ಕ್ರಾಸ್ ನಿಂದ ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ಸುಮಾರು 1 ಕಿ.ಮೀ ವರೆಗಿನ ಮಣ್ಣಿನ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಕಳೆದ 6 ವರ್ಷಗಳಿಂದ ಕಾಲೋನಿ ನಿವಾಸಿಗಳು ನೀಡಿರುವ ಹಲವು ಮನವಿಗಳಿಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಪಂದನೆ ಮಾಡದೆ ಇದ್ದಿದ್ದರಿಂದ ಬೇಸತ್ತ ನಾಗರಿಕರು ಮುಂಬರುವ ಲೋಕಸಭೆಯನ್ನು ಬಹಿಷ್ಕರಿಸುವ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಕೆ ಮಾಡಿ ತಮ್ಮ ಅಸಹನೆಯನ್ನು ಹೊರಗೆ ಹಾಕಿದ್ದಾರೆ.ರಸ್ತೆ ಅಭಿವೃದ್ದಿಗೊಳಿಸದೆ ಹೋದರೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕದಿರಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಹೊಸಾಡು ಗ್ರಾ.ಪಂ ಮಾಜಿ ಸದಸ್ಯ ಸೀತಾರಾಮ ಶೆಟ್ಟಿ,ರಾಮಣ್ಣ,ಅವಿನಾಶ್,ಲಚ್ಚು,ಸುಶೀಲ,ಮಾಲತಿ,ನರಸಿಂಹ,ವಿವೇಕ,ರಸಿಕ,ಅಭಿಷೇಕ,ಸುಭಾಷ್,ನೇತ್ರಾ,
ದಿನೇಶ,ಗುಲಾಬಿ,ರಾಮು ಉಪಸ್ಥಿತರಿದ್ದರು.

Advertisement

Share

Leave a comment

Your email address will not be published. Required fields are marked *

You cannot copy content of this page