ಉಪ್ಪುಂದ ಕರ್ಕಿಕಳಿಯಲ್ಲಿ ದೋಣಿ ದುರಂತ;ಓರ್ವ ಮೀನುಗಾರ ಸಾವು,ಇನ್ನೊಬ್ಬ ನಾಪತ್ತೆ

Share

ಕುಂದಾಪುರ:ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಅಲೆಯ ರಭಸಕ್ಕೆ ನಾಡದೋಣಿಯೊಂದು ಸಮುದ್ರದಲ್ಲಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಮೃತ ಪಟ್ಟಿದ್ದು,ಇನ್ನೋರ್ವ ಮೀನುಗಾರ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ಮೀನುಗಾರಿಕೆಯಲ್ಲಿ ತೊಡಗಿಕೊಳ್ಳುವ ಹಿನ್ನೆಲೆಯಲ್ಲಿ 8 ಜನರಿದ್ದ ಮೀನುಗಾರರ ತಂಡ ನಾಡದೋಣಿ ಮೂಲಕ ಸಮುದ್ರಕ್ಕೆ ತೆರಳಿದ್ದಾರೆ,ಮೀನುಗಾರಿಕೆ ಮುಗುಸಿಕೊಂಡು ಮರಳಿ ದಡಕ್ಕೆ ಬರುತ್ತಿರುವ ಸಂದರ್ಭದಲ್ಲಿ ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿದ ನಾಡದೋಣಿ ಮಗುಚಿ ಬಿದ್ದಿದೆ.ದೋಣಿ ದುರಂತದಲ್ಲಿ ನಾಗೇಶ್ ಖಾರ್ವಿ (30) ಮೃತ ಪಟ್ಟಿದ್ದಾರೆ,ಸತೀಶ್ ಖಾರ್ವಿ (34) ಎಂಬುವವರು ಸಮುದ್ರದಲ್ಲಿ ನಾಪತ್ತೆ ಆಗಿದ್ದಾರೆ.6 ಜನ ಮೀನುಗಾರರು ಈಜಿ ಕೊಂಡು ದಡ ಸೇರಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಉಪ್ಪುಂದ ಭಾಗದಲ್ಲಿ ಸೂತಕದ ಛಾಯೆ ಮಡುಗಟ್ಟಿದೆ.ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ,ಸರ್ಕಲ್ ಸಂತೋಷ್ ಕಾಯ್ಕಿಣಿ,ಅಗ್ನಿಶಾಮಕ ದಳ ಸಿಬ್ಬಂದಿ,ಮೀನುಗಾರಿಕಾ ಸಹಾಯಕ ನಿರ್ದೇಶಕರು,ಮುಳುಗುತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಘಟನಾ ಸ್ಥಳದಲ್ಲಿ ಹಾಜರಿದ್ದರು.

Advertisement

Share

Leave a comment

Your email address will not be published. Required fields are marked *

You cannot copy content of this page