ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ.ಕೆ ಭೇಟಿ

Share

ಕುಂದಾಪುರ:ಬೈಂದೂರು ತಾಲೂಕಿನ ನೆರೆ ಪೀಡಿತ ಪ್ರದೇಶವಾದ ನಾವುಂದ ಸಾಲ್ಬುಡಕ್ಕೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ.ಕೆ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನೆರೆ ಬಾಧಿತ ಪ್ರದೇಶಗಳಲ್ಲಿ ಮುನನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ,ಆರ್.ಐ ಮಂಜು,ವಿ.ಎ ಸಂದೀಪ್ ಉಪಸ್ಥಿತರಿದ್ದರು.
ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲ್ಬುಡ,ನಾವುಂದ ಹಾಗೂ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರುದ್ವೀಪ,ಹಡವು,ಪಡುಕೋಣೆ,ಚಿಕ್ಕಳ್ಳಿ,ಬಡಾಕೆರೆ ಮತ್ತು ಹೊಸಾಡು,ಸೇನಾಪುರ ಭಾಗದ ನದಿ ತೀರ ಪ್ರದೇಶಗಳಲ್ಲಿ ಸತತ ಮೂರು ದಿನಗಳಿಂದ ನೆರೆ ನೀರು ಆವರಿಸಿಕೊಂಡಿದ್ದರ ಪರಿಣಾಮ ಅಪಾರ ಪ್ರಮಾಣದಲ್ಲಿ ಕೃಷಿ ನಷ್ಟ ಉಂಟಾಗಿದೆ.

Advertisement

Share

Leave a comment

Your email address will not be published. Required fields are marked *

You cannot copy content of this page